ಸಿಎಂ ಇಬ್ರಾಹಿಂಗೆ ಹಿನ್ನಡೆ

Prasthutha|

ಬೆಂಗಳೂರು: ದೇವೇಗೌಡ ಕುಟುಂಬದ ವಿರುದ್ಧದ ಸಮರದಲ್ಲಿ ಮಾಜಿ ಜೆಡಿಎಸ್ ಅಧ್ಯಕ್ಷ ಸಿಎಂ ಇಬ್ರಾಹಿಂಗೆ ಹಿನ್ನಡೆಯಾಗಿದೆ. ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಹೆಚ್‌ಡಿಕೆ ನೇಮಕ‌ ಪ್ರಶ್ನಿಸಿ ಸಿಎಂ ಇಬ್ರಾಹಿಂ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರು ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ವಜಾ ಮಾಡಿದೆ.

- Advertisement -

ಏಕಪಕ್ಷೀಯವಾಗಿ ತಮ್ಮನ್ನು ಉಚ್ಚಾಟನೆ ಮಾಡಿದ್ದಾರೆ, ನಿಯಮಗಳಿಗೆ ವಿರುದ್ಧವಾಗಿ ತಮ್ಮನ್ನು ರಾಜ್ಯಾಧ್ಯಕ್ಷ ಹುದ್ದೆಯಿಂದ ವಜಾ ಮಾಡಿದ್ದಾರೆ ಎಂದು ಸಿಎಂ ಇಬ್ರಾಹಿಂ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು.

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್‌ ಮೈತ್ರಿ ಮಾಡಿಕೊಂಡಿದ್ದಕ್ಕೆ ಸಿಎಂ ಇಬ್ರಾಹಿಂ ಅಸಮಾಧಾನಗೊಂಡಿದ್ದರು. ಜೆಡಿಎಸ್‌ನಿಂದ ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಅವರನ್ನು ಉಚ್ಛಾಟಿಸಲು ಮುಂದಾಗಿದ್ದರು. ಬಳಿಕ ಅವರೇ ಪಕ್ಷದಿಂದ ವಜಾಗೊಂಡಿದ್ದರು.

- Advertisement -

ಬಳಿಕ ಕುಮಾರಸ್ವಾಮಿ ಅವರನ್ನು ಜೆಡಿಎಸ್ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿ ದೇವೇಗೌಡ ಆದೇಶಿಸಿದ್ದರು. ಆದರೆ ನಾನೇ ಜೆಡಿಎಸ್ ಅಸಲಿ ರಾಜ್ಯಾಧ್ಯಕ್ಷ ಎಂದು ಸಿಎಂ ಇಬ್ರಾಹಿಂ ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಸಿಎಂ ಇಬ್ರಾಹಿಂ ಅರ್ಜಿಯನ್ನು ಕೋರ್ಟ್ ವಜಾಗೊಳಿಸುವ ಮೂಲಕ ಹೆಚ್‌ಡಿ ಕುಮಾರಸ್ವಾಮಿಯೇ ಜೆಡಿಎಸ್ ರಾಜ್ಯಾಧ್ಯಕ್ಷ ಎನ್ನುವುದನ್ನು ಕೋರ್ಟ್ ಎತ್ತಿ ಹಿಡಿದಿದೆ.

Join Whatsapp