ಆಶ್ರಮಕ್ಕೆ ಬೆಂಕಿ ಹಚ್ಚಿದ ಪ್ರಕರಣ| ಆರೆಸ್ಸೆಸ್ ಕಾರ್ಯಕರ್ತನ ಬಂಧನ

Prasthutha|

ತಿರುವನಂತಪುರಂ: ಆಶ್ರಮಕ್ಕೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೆಸ್ಸೆಸ್ ಕಾರ್ಯಕರ್ತನೊಬ್ಬನನ್ನು ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ.
ಕುಂದಮಾನ್‌ಕಡವ್‌ ಮೂಲದ ಕೃಷ್ಣಕುಮಾರ್‌ ಬಂಧಿತ ಆರೋಪಿಯಾಗಿದ್ದಾನೆ.

- Advertisement -

ಬೆಂಕಿ ಹಚ್ಚಿದ ಪ್ರಕರಣದ ಮತ್ತೋರ್ವ ಆರೋಪಿ ಕುಂದಮಾನ್ ಕಡವ್ ಮೂಲದ ಆರೆಸ್ಸೆಸ್ ಕಾರ್ಯಕರ್ತ ಪ್ರಕಾಶ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರಕಾಶ್ ಆತ್ಮಹತ್ಯೆ ಪ್ರಕರಣದಲ್ಲೂ ಕೃಷ್ಣಕುಮಾರ್ ಆರೋಪಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂದೀಪಾನಂದಗಿರಿಯ ಆಶ್ರಮವನ್ನು ತಾನೂ ಸೇರಿದಂತೆ ಆರ್‌ಎಸ್‌ಎಸ್ ಕಾರ್ಯಕರ್ತರು ಸೇರಿಕೊಂಡು ಸುಟ್ಟು ಹಾಕಿರುವುದಾಗಿ ಪ್ರಕಾಶ್ ಹಲವರ ಬಳಿ ಹೇಳಿದ್ದನು. ಇದರಿಂದ ಕುಪಿತಗೊಂಡ ಕೃಷ್ಣಕುಮಾರ್ ಸೇರಿದಂತೆ ಆರೆಸ್ಸೆಸ್ ಕಾರ್ಯಕರ್ತರು ಪ್ರಕಾಶ್‌‌ನನ್ನು ಬರ್ಬರವಾಗಿ ಥಳಿಸಿದ್ದರು. ಘಟನೆ ನಡೆದ ಒಂದು ಗಂಟೆಯೊಳಗೆ ಪ್ರಕಾಶ್ ಆತ್ಮಹತ್ಯೆ ಮಾಡಿಕೊಂಡಿದ್ದನು.

Join Whatsapp