ಕೇರಳ ರಾಜ್ಯಪಾಲರ ಶೋಕಾಸ್ ನೋಟಿಸ್ ವಿರುದ್ಧ ಮತ್ತೆ ಹೈಕೋರ್ಟ್ ಮೆಟ್ಟಿಲೇರಿದ ಏಳು ಕುಲಪತಿಗಳು

Prasthutha|

ತಿರುವನಂತಪುರಂ: ವಿಶ್ವವಿದ್ಯಾಲಯಗಳ ಕುಲಾಧಿಪತಿಯೂ ಆಗಿರುವ ರಾಜ್ಯಪಾಲ ಆರಿಫ್ ಮುಹಮ್ಮದ್ ಖಾನ್ ಅವರು ತಮಗೆ ಶೋಕಾಸ್ ನೋಟಿಸ್ ನೀಡಿದ್ದನ್ನು ಪ್ರಶ್ನಿಸಿ ಕೇರಳದ ಏಳು ವಿಶ್ವವಿದ್ಯಾಲಯಗಳ ಕುಲಪತಿಗಳು ಬುಧವಾರ ಮತ್ತೆ ಹೈಕೋರ್ಟ್ ಮೊರೆ ಹೋಗಿದ್ದಾರೆ.

- Advertisement -

ನ್ಯಾಯಮೂರ್ತಿ ದೇವನ್ ರಾಮಚಂದ್ರನ್ ಅವರಿದ್ದ ಏಕಸದಸ್ಯ ಪೀಠವು ಇಂದು ಅವರ ಮನವಿಯನ್ನು ಪರಿಗಣಿಸಲಿದೆ.

ರಾಜೀನಾಮೆ ಸಲ್ಲಿಸುವಂತೆ ಆದೇಶಿಸಿದ್ದರೂ, ಯಾವುದೇ ಪ್ರತಿಕ್ರಿಯೆ ನೀಡದ್ದರಿಂದ ರಾಜ್ಯ ಪಾಲರು ಏಳು ಕುಲಪತಿಗಳಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ.

- Advertisement -

ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿ ಖಾನ್ ಅವರು ಒಂಬತ್ತು ಸರಕಾರಿ ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ರಾಜೀನಾಮೆ ಸಲ್ಲಿಸುವಂತೆ ಅಕ್ಟೋಬರ್ 23 ರಂದು ಸೂಚಿಸಿದ್ದರು. ಆದರೆ, ಮರುದಿನವೇ ಈ ಆದೇಶಕ್ಕೆ ತಡೆ ನೀಡಿರುವ ಹೈಕೋರ್ಟ್, ವಿವಿಗಳ ಪದನಿಮಿತ್ತ ಕುಲಪತಿಯಾಗಿರುವ ರಾಜ್ಯಪಾಲರು ಶೋಕಾಸ್ ನೋಟಿಸ್ ಗಳ ಆಧಾರದ ಮೇಲೆ ಆದೇಶ ಹೊರಡಿಸುವವರೆಗೆ ಕುಲಪತಿಗಳು ತಮ್ಮ ಹುದ್ದೆಗಳಲ್ಲಿ ಮುಂದುವರಿಯಬಹುದು ಎಂದು ಹೇಳಿತ್ತು.

Join Whatsapp