ಸೆಕ್ಸ್ ಸಿಡಿ ಪ್ರಕರಣ | ಕೊನೆಗೂ ಮೌನ ಮುರಿದ ಯಡಿಯೂರಪ್ಪ

Prasthutha|

ಬೆಳಗಾವಿ: ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿಯಲ್ಲಿರುವ ಸಂತ್ರಸ್ತ ಯುವತಿ ನ್ಯಾಯಾಲಯದಲ್ಲಿ ಪ್ರತ್ಯಕ್ಷಗೊಂಡಿದ್ದು, ಯುವತಿ ಏನು ಹೇಳಿಕೆ ನೀಡುತ್ತಿದ್ದರೂ  ಅದು ದುರುದ್ದೇಶ ಮತ್ತು ರಾಜಕೀಯ ಪ್ರೇರಿತವಾಗಿ ಆರೋಪ ಮಾಡುತ್ತಿದ್ದಾಳೆ ಎಂದು ಮುಖ್ಯಮಂತ್ರಿ ಬಿ.ಎಸ್.​​ ಯಡಿಯೂರಪ್ಪ ಹೇಳಿದ್ದಾರೆ.

- Advertisement -

  “ಪ್ರಕರಣವು ಬೆಳಗಾವಿ ಉಪ ಚುನಾವಣೆ ಮೇಲೆ ಯಾವುದೇ ಪರಿಣಾಮ ಬಿರೋದಿಲ್ಲ. ಪ್ರಕರಣದ ಯುವತಿ ದುರುದ್ದೇಶ ಮತ್ತು ರಾಜಕೀಯ ಪ್ರೇರಿತವಾಗಿಆರೋಪ ಮಾಡುತ್ತಿದ್ದಾಳೆ” ಎಂದು ಮುಖ್ಯಮಂತ್ರಿ ಬಿ.ಎಸ್.​​ ಯಡಿಯೂರಪ್ಪ ಹೇಳಿದ್ದಾರೆ.

ಬೆಳಗಾವಿ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಮಂಗಳಾ ಅಂಗಡಿಯವ್ರ ನಾಮಪತ್ರ ಸಲ್ಲಿಕೆಯ ನಂತ್ರ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ‘ ಯುವತಿ ಎಸ್‌ಐಟಿ‌ ಬಗ್ಗೆ ಆರೋಪ ಮಾತನಾಡ್ತಿರೋದು ಎಲ್ಲರಿಗೂ ಗೊತ್ತಿದೆ. ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಎಸ್​​ಐಟಿ ಮೂಲಕ ನಿಷ್ಪಕ್ಷಪಾತ ತನಿಖೆ ಮಾಡುತ್ತಿದ್ದಾರೆ. ತನಿಖೆ ಒಂದು ಹಂತದಲ್ಲಿ ಇದೆ. ರಮೇಶ್ ಜಾರಕಿಹೊಳಿಯವರನ್ನು ಬೆಳಗಾವಿ ಚುನಾವಣಾ ಪ್ರಚಾರಕ್ಕೆ ಬನ್ನಿ ಎಂದು ಕರೆದಿದ್ದೇನೆ ಅವರು ಪ್ರಚಾರಕ್ಕೆ ಬರಲಿ’ ಎಂದು ಅವರು ಕೇಳಿಕೊಂಡಿದ್ದಾರೆ.

Join Whatsapp