ಲೈಂಗಿಕ ದೌರ್ಜನ್ಯ ಪ್ರಕರಣ: ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದ ಹೆಚ್​ ಡಿ ರೇವಣ್ಣ

Prasthutha|

ಬೆಂಗಳೂರು: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​​ನಲ್ಲಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜೆಡಿಎಸ್ ಶಾಸಕ ಹೆಚ್​ಡಿ ರೇವಣ್ಣ ಶುಕ್ರವಾರ ಹಿಂಪಡೆದಿದ್ದಾರೆ.

- Advertisement -

ರೇವಣ್ಣ ವಿರುದ್ಧ ಅತ್ಯಾಚಾರದ ಆರೋಪ ಸೇರಿಸಿಲ್ಲ ಎಂಬ ವಿಶೇಷ ತನಿಖಾ ತಂಡದ ಹೇಳಿಕೆ ಬೆನ್ನಲ್ಲೇ ರೇವಣ್ಣ ಈ ಕ್ರಮ ಕೈಗೊಂಡಿದ್ದಾರೆ. ರೇವಣ್ಣ ವಿರುದ್ಧ ಅತ್ಯಾಚಾರದ ಆರೋಪವಿಲ್ಲದಿರುವುದರಿಂದ ನಿರೀಕ್ಷಣಾ ಜಾಮೀನು ಅಗತ್ಯವಿಲ್ಲ ಎಂದು ಎಸ್​ಐಟಿಯ ಎಸ್​​​ಪಿಪಿ ಎನ್. ಜಗದೀಶ್ ಕೋರ್ಟ್​​ಗೆ ತಿಳಿಸಿದ್ದರು.

ಮಹಿಳೆಯೊಬ್ಬರು ಕಾಣೆಯಾಗಿರುವ ವಿಚಾರವಾಗಿ ರೇವಣ್ಣ ವಿರುದ್ಧ ಮೈಸೂರಿನ ಕೆಆರ್​ ನಗರದಲ್ಲಿ ಪ್ರಕರಣ ದಾಖಲಾಗಿದೆ.



Join Whatsapp