ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ; ತಪ್ಪಿತಸ್ಥರ ತನಿಖೆಗೆ ಮನವಿ

Prasthutha|

ಶಿವಮೊಗ್ಗ: ಶಿವಮೊಗ್ಗ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿನಿ ಮೇಲೆ ಸಹಾಯಕ ಪ್ರಾಧ್ಯಾಪಕರೊಬ್ಬರಿಂದ  ನಡೆದ ಲೈಂಗಿಕ ದೌರ್ಜನ್ಯವನ್ನು ಮುಚ್ಚಿ ಹಾಕಲಾಗಿದ್ದು, ಕೂಡಲೇ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ನಗರದ ವಕೀಲರ ತಂಡ  ಪೀಪಲ್ಸ್ ಲಾಯರ್ಸ್ ಗಿಲ್ಡ್ ವತಿಯಿಂದ ಮಂಗಳವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

- Advertisement -

ತನ್ನ ಮೇಲೆ ಸಹಾಯಕ ಪ್ರಾಧ್ಯಾಪಕರೊಬ್ಬರು ಲೈಂಗಿಕ ದೌರ್ಜನ್ಯ ಎಸಗಿದ್ದಾಗಿ  ಉತ್ತರ ಭಾರತದ ವೈದ್ಯಕೀಯ ವಿದ್ಯಾರ್ಥಿನಿ ಸಿಮ್ಸ್ ನಿರ್ದೇಶಕರಿಗೆ ಜುಲೈ 15ರಂದು ಲಿಖಿತ ದೂರು ನೀಡಿದ್ದರು. ಆದರೆ ಅದನ್ನು ಕಾಲೇಜಿನ ಆಡಳಿತ ಮಂಡಳಿ ಗಂಭೀರ ವಾಗಿ ಪರಿಗಣಿಸಿಲ್ಲ. ದೌರ್ಜನ್ಯಕ್ಕೊಳಗಾದ ವಿದ್ಯಾರ್ಥಿನಿ ಮೇಲೆ ಒತ್ತಡ ಹೇರಿ ನೀಡಿರುವ ದೂರು ಹಿಂಪಡೆಯುವಂತೆ ಮಾಡಲಾಗಿದೆ. ಅದು ಖಂಡನೀಯ. ನೊಂದ ವಿದ್ಯಾರ್ಥಿನಿ ಇಲ್ಲಿ ಯಾವುದೇ ಬೆಂಬಲವಿಲ್ಲದೇ ಅಸಹಾಯಕರಾಗಿದ್ದು, ಇದನ್ನೇ ದುರುಪಯೋಗಪಡಿಸಿಕೊಂಡು ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ’ ಎಂದು ವಕೀಲರ ತಂಡ ಆರೋಪಿಸಿದೆ.

ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದವರು ಮತ್ತು ಪ್ರಕರಣ ಮುಚ್ಚಿ ಹಾಕಲು ಪ್ರಯತ್ನಿಸಿ ದವರ ವಿರುದ್ಧ ಕ್ರಮ ಕೈಗೊಂಡು, ಜಿಲ್ಲಾಡಳಿತದಿಂದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿ ಸುವಂತೆ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಲು ಮನವಿ ಮಾಡಲಾಯಿತು.

- Advertisement -

ಈ ಸಂದರ್ಭದಲ್ಲಿ ಗಿಲ್ಡ್ ನ ಪ್ರಮುಖರಾದ ಕೆ.ಪಿ.ಶ್ರೀಪಾಲ್, ವಿಜಯಕುಮಾರ್, ಶೀರಾಜ್, ಸ್ವರೂಪ್, ಚಿರಂತ್ ಬಿ.ಎ, ವಿಕಾಸ್, ರಘುರಾಮನ್, ಚರಣ್  ಉಪಸ್ಥಿತರಿದ್ದರು.

Join Whatsapp