ಕ್ಷುಲ್ಲಕ ಕಾರಣಕ್ಕೆ ಮುಸ್ಲಿಮ್ ಬಾಲಕನ ಗುಂಪುಹತ್ಯೆ

Prasthutha|

ಆಗ್ರಾ: ನೈಋತ್ಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ 17 ವರ್ಷ ಪ್ರಾಯದ ಮುಹಮ್ಮದ್ ಶೌಕತ್ ಎಂಬಾತನನ್ನು ಮೂವರು ಬಾಲಾಪರಾಧಿಗಳು ಸೇರಿದಂತೆ ಕನಿಷ್ಠ 15 ಜನರ ಗುಂಪು ಇರಿದು ಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಡೆದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಹೋರಾಟಕ್ಕೆ ಕುಟುಂಬದ ಸದಸ್ಯರು ಮುಂದಾಗಿದ್ದಾರೆ.

- Advertisement -

ಇನ್ ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಗಳನ್ನು ಅಪ್ಲೋಡ್ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಶೌಕತ್ ಮತ್ತು ಆರೋಪಿಗಳ ನಡುವೆ ಜಗಳ ಪ್ರಾರಂಭವಾಗಿ ಶೌಕತ್ ನನ್ನು ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಉತ್ತಮ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂವರು ಬಾಲಾಪರಾಧಿಗಳನ್ನು ಬಂಧಿಸಲಾಗಿದೆ. ಇನ್ನುಳಿದ ಆರೋಪಿಗಳಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.

- Advertisement -

ಮಾಧ್ಯಮದೊಂದಿಗೆ ಮಾತನಾಡಿದ ಸಂತ್ರಸ್ತನ ಸಹೋದರಿ, ಕನಿಷ್ಠ 20 ಮಂದಿಯ ದುಷ್ಕರ್ಮಿಗಳ ತಂಡವೊಂದು ನನ್ನ ಸಹೋದರನನ್ನು ಅಮಾನುಷವಾಗಿ ಕೊಂದು ಹಾಕಿದೆ ಎಂದು ತಿಳಿಸಿದ್ದಾಳೆ.

“ತನ್ನ ಮಗನನ್ನು ಕೊಂದ ಆರೋಪಿಗಳನ್ನು ಗಲ್ಲಿಗೇರಿಸಬೇಕು” ಎಂದು ಮೃತನ ತಾಯಿ ಆಗ್ರಹಿಸಿದ್ದಾರೆ.

ಈ ಮಧ್ಯೆ ಶೌಕತ್ ಕುಟುಂಬದ ಸದಸ್ಯರು ಉತ್ತಮ್ ನಗರ ಪೊಲೀಸ್ ಠಾಣೆ ಮುಂದೆ ಜಮಾಯಿಸಿ ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.

Join Whatsapp