Home ಟಾಪ್ ಸುದ್ದಿಗಳು ಶನಿವಾರಸಂತೆ: ವಿದ್ಯಾರ್ಥಿನಿಯರಿಗೆ ಹಲ್ಲೆಗೈದ ಆರೋಪಿಗಳಿಗೆ ಸಂಘಪರಿವಾರದಿಂದ ಸನ್ಮಾನ!

ಶನಿವಾರಸಂತೆ: ವಿದ್ಯಾರ್ಥಿನಿಯರಿಗೆ ಹಲ್ಲೆಗೈದ ಆರೋಪಿಗಳಿಗೆ ಸಂಘಪರಿವಾರದಿಂದ ಸನ್ಮಾನ!

ಶನಿವಾರಸಂತೆ: ಮುಸ್ಲಿಮ್ ವಿದ್ಯಾರ್ಥಿನಿಯರನ್ನು ಎಳೆದೊಯ್ದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದ ಇಬ್ಬರು ಸಂಘಪರಿವಾರದ ಕಾರ್ಯಕರ್ತರು ಕೇವಲ ಹದಿನೈದು ದಿನಗಳಲ್ಲಿ ಬಿಡುಗಡೆಗೊಂಡಿದ್ದು, ಆರೋಪಿಗಳನ್ನು ಸನ್ಮಾನಿಸಿ ಸಂಭ್ರಮಿಸಿರುವ ಕುರಿತು ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ವಿಧ್ಯಾರ್ಥಿನಿಯರಿಗೆ ದೌರ್ಜನ್ಯವೆಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರಸಂತೆ ಠಾಣೆಯ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಇಬ್ಬರನ್ನು ಬಂಧಿಸಿದ್ದರು. ಆರೋಪಿಗಳು ಕೇವಲ ಹದಿನೈದು ದಿನಗಳಲ್ಲಿ ಬಿಡುಗಡೆಗೊಂಡಿದ್ದು, ಹಿಂದೂ ಜಾಗರಣ ವೇದಿಕೆಯ ಪ್ರಮುಖರು ಸೋಮವಾರಪೇಟೆಯಲ್ಲಿ ಸಿಹಿ ಹಂಚಿ ಕೇಸರಿ ಶಾಲು ಹಾಕಿ ಪಟಾಕಿ ಸಿಡಿಸುವ ಮೂಲಕ ಸ್ವಾಗತಿಸಿದ್ದಾರೆ.

ಶನಿವಾರ ಸಂತೆಯಲ್ಲಿ ಹೆಣ್ಣುಮಕ್ಕಳ ಜೊತೆ ಅಸಭ್ಯವಾಗಿ ವರ್ತಿಸಿ ನಾಗರಿಕ ಸಮಾಜ ತಲೆ ತಗ್ಗಿಸುವಂಥ ಕೆಲಸ ಮಾಡಿ ಜೈಲಿಗೆ ಹೋದವರಿಗೆ ಸಂಘಪರಿವಾರದ ಕಾರ್ಯಕರ್ತರು ಸ್ವಾಗತ ಕೋರಿದ್ದಾರೆ ಎಂದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಇಬ್ಬರು ಮುಸ್ಲಿಮ್ ವಿದ್ಯಾರ್ಥಿನಿಯರು ತರಗತಿ ಮುಗಿಸಿ ಬಸ್ಸ್ ಗಾಗಿ ಶನಿವಾರಸಂತೆ ಕೆ.ಆರ್.ಸಿ.ವೃತ್ತದ ಬಳಿ ನಿಂತಿದ್ದಾಗ ಸಂಘಪರಿವಾರದ ಕಾರ್ಯಕರ್ತರು ಸಮೀಪದ ಕಾಂಪ್ಲೆಕ್ಸ್ ಒಂದಕ್ಕೆ ಎಳೆದೊಯ್ದು ಅವರು ಧರಿಸಿದ ಬುರ್ಖಾವನ್ನು ಹರಿದು ಹಾಕಿ ಮಾರಣಾಂತಿಕ ಹಲ್ಲೆ ನಡೆಸಿ ಎಳೆದಾಡಿದ್ದರು. ಈ ಬಗ್ಗೆ ವಿದ್ಯಾರ್ಥಿನಿಯರು ನೀಡಿದ ದೂರಿನಂತೆ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Join Whatsapp
Exit mobile version