ಸಿಎಂ ಮಾಧ್ಯಮ ಸಂಯೋಜಕರಾಗಿ ಶಂಕರ್ ಪಾಗೋಜಿ ನೇಮಕ

Prasthutha|

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕರಾದ ಗುರುಲಿಂಗ ಸ್ವಾಮಿ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹಿರಿಯ ಪತ್ರಕರ್ತ ಶಂಕರ್ ಪಾಗೋಜಿ ಅವರನ್ನು ನೇಮಕ ಮಾಡಲಾಗಿದೆ.

- Advertisement -


ಹಿರಿಯ ಪತ್ರಕರ್ತರಾದ ಶಂಕರ್ ಪಾಗೋಜಿ ಅವರು ಟಿವಿ ಮಾಧ್ಯಮ, ಪತ್ರಿಕೆಗೆಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.
ಬೊಮ್ಮಾಯಿ ಗೃಹ ಸಚಿವರಾದಾಗಿಂದಲೂ ಮಾಧ್ಯಮ ವರ್ಗ ನೋಡಿಕೊಳ್ಳುತ್ತಿದ್ದ ಗುರುಲಿಂಗ ಸ್ವಾಮಿ ಅವರು ಆಗಸ್ಟ್ 22 ರಂದು ಹೃದಯಾಘಾತದಿಂದ ನಿಧನರಾಗಿದ್ದರು. ಅವರ ನಂತರ ತೆರವಾದ ಸ್ಥಾನಕ್ಕೆ ಹಿರಿಯ ಪತ್ರಕರ್ತರಾದ ಶಂಕರ್ ಪಾಗೋಜಿ ಅವರನ್ನು ನೇಮಕ ಮಾಡಲಾಗಿದೆ.

Join Whatsapp