Home ಟಾಪ್ ಸುದ್ದಿಗಳು ಕೊಳದ ಮಠದ ಶಾಂತವೀರ ಸ್ವಾಮೀಜಿ ನಿಧನ

ಕೊಳದ ಮಠದ ಶಾಂತವೀರ ಸ್ವಾಮೀಜಿ ನಿಧನ

ಬೆಂಗಳೂರು: ಬೆಂಗಳೂರಿನ ಕೊಳದ ಮಠದ ಶಾಂತವೀರ ಸ್ವಾಮೀಜಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಅವರಿಗೆ 80 ವರ್ಷ ವಯಸ್ಸಾಗಿತ್ತು.

ನಿನ್ನೆಯಷ್ಟೇ ಮಹಾಲಕ್ಷ್ಮಿ ಲೇಔಟ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅವರಿಗೆ ಇಂದು ಮುಂಜಾನೆ ದಿಢೀರನೆ ಎದೆನೋವು ಕಾಣಿಸಿಕೊಂಡಿದ್ದು,  ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಅಷ್ಟರದಲ್ಲಿ ಅವರು ಮೃತಪಟ್ಟಿದ್ದಾರೆ.

ಭಕ್ತರ ದರ್ಶನಕ್ಕೆ ಮಠದ ಆವರಣದಲ್ಲಿ ಅವಕಾಶ ಮಾಡಿಕೊಡಲಾಗಿದ್ದು, ಇಂದು ಸಂಜೆಯೇ ಮಠದ ಆವರಣದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ. ಶಾಂತಿನಗರದಲ್ಲಿರುವ ಮಠದಲ್ಲಿ ಸಂಜೆ ವಿಧಿವಿಧಾನ ನಡೆಯಲಿದ್ದು, ಗಣ್ಯರು ಶ್ರೀಗಳ ಪಾರ್ಥೀವ ಶರೀರದ ದರ್ಶನ ಪಡೆಯುತ್ತಿದ್ದಾರೆ.

Join Whatsapp
Exit mobile version