ಶಿಂಧೆ, ಫಡ್ನವೀಸ್, ಅಜಿತ್‌ ಪವಾರ್‌ರನ್ನು ಔತನಕೂಟಕ್ಕೆ ಆಹ್ವಾನಿಸಿದ ಶರದ್ ಪವಾರ್

Prasthutha|

ಮುಂಬೈ:ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಶರದ್ಚಂದ್ರ ಪವಾರ್) ಅಧ್ಯಕ್ಷ ಶರದ್ ಪವಾರ್ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪ ಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವಿಸ್ ಮತ್ತು ಅಜಿತ್ ಪವಾರ್ ಅವರನ್ನು ಬಾರಾಮತಿಯಲ್ಲಿರುವ ತಮ್ಮ ನಿವಾಸದಲ್ಲಿ ಮಾ.2 ರಂದು ಊಟ ಮಾಡಲು ಆಹ್ವಾನಿಸಿದ್ದಾರೆ.

- Advertisement -

ಸಿಎಂ ಶಿಂಧೆ, ಡಿಸಿಎಂ ಫಡ್ನವೀಸ್ ಹಾಗೂ ಅಜಿತ್ ಪವಾರ್ ಪುಣೆಯ ಬರಮತಿಯಲ್ಲಿರುವ ವಿದ್ಯಾ ಪ್ರತಿಷ್ಠಾನ ಕಾಲೇಜಿನಲ್ಲಿ ನಮೋ ಮಹಾರೋಜ್ಗಾರ್ ಮೇಲವದಲ್ಲಿ ಭಾಗಿಯಾಗಲಿದ್ದಾರೆ. ರಾಜಕೀಯ ಎದುರಾಳಿಗಳಿಗೆ ಶರದ್ ಪವಾರ್ ಕಳಿಸಿರುವ ಈ ಆಹ್ವಾನ ಅಚ್ಚರಿ ಮೂಡಿಸಿದೆ.

ಲೋಕಸಭೆಯಲ್ಲಿ ಶರದ್ ಪವಾರ್ ಪುತ್ರಿ ಪ್ರತಿನಿಧಿಸುತ್ತಿರುವ ಬರಮತಿ ಕ್ಷೇತ್ರದಿಂದ ಅವರ ವಿರುದ್ಧ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆ ಅಜಿತ್ ಪವಾರ್ ಅವರೊಂದಿಗೆ ಚರ್ಚೆ ನಡೆಯುತ್ತಿದೆ. ಆಹ್ವಾನ ಪತ್ರದಲ್ಲಿ ಬರಮತಿಯಲ್ಲಿ ನಡೆಯುತ್ತಿರುವ ಅಧಿಕೃತ ಕಾರ್ಯಕ್ರಮದಲ್ಲಿ ಭಾಗಿಯಾಗುವುದಕ್ಕೆ ತಾವು ಹಾಗೂ ತಮ್ಮ ಪುತ್ರಿ ಸುಪ್ರಿಯಾ ಸುಲೆ ಆಸಕ್ತರಾಗಿರುವುದಾಗಿ ಪವಾರ್ ತಿಳಿಸಿದ್ದಾರೆ.

Join Whatsapp