ಶರಾವತಿ ಜಲ ವಿದ್ಯುತ್ ಯೋಜನೆ: ಸಂತ್ರಸ್ತರೊಂದಿಗೆ ಸಚಿವರ ಸಭೆ

Prasthutha|

ಬೆಂಗಳೂರು: ಶರಾವತಿ ಜಲ ವಿದ್ಯುತ್ ಯೋಜನೆಯಲ್ಲಿ ಜಮೀನು ಕಳೆದುಕೊಂಡು ದಶಕಗಳಿಗೂ ಹೆಚ್ಚು ಸಮಯದಿಂದ ನನೆಗುದಿಗೆ ಬಿದ್ದಿರುವ ರೈತ ಕುಟುಂಬಗಳಿಗೆ ಪರಿಹಾರ ಒದಗಿಸುವ ಸಂಬಂಧ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಸಾಗರ ಬಿಜೆಪಿ ಶಾಸಕ ಹರತಾಳು ಹಾಲಪ್ಪ ಇಂದು ಸಂತ್ರಸ್ತರ ನಿಯೋಗದ ಸದಸ್ಯರ ಜತೆ ಸಭೆ ನಡೆಸಿದರು.

- Advertisement -

ಈ ಸಂಬಂಧ ಕೂಲಂಕಷವಾಗಿ ಚರ್ಚಿಸಿ, ಪರಿಹಾರ ಕಂಡು ಕೊಳ್ಳಲು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ದೆಹಲಿಗೆ ಹೋಗಿ ಸಂತ್ರಸ್ತರ ನೆರವಿಗೆ ನಿಲ್ಲಬೇಕು ಎಂಬ ಅಭಿಪ್ರಾಯವೂ ಸಭೆಯಲ್ಲಿ ವ್ಯಕ್ತವಾಯಿತು.

ರಾಜ್ಯ ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೆದ್ ಅಖ್ತರ್, ಶಿವಮೊಗ್ಗ ಜಿಲ್ಲಾಧಿಕಾರಿ ಸೆಲ್ವಾಮಣಿ ಸೇರಿದಂತೆ ಹಿರಿಯ ಅಧಿಕಾರಿಗಳೂ ಉಪಸ್ಥಿತರಿದ್ದರು.

Join Whatsapp