ಶಿವಮೊಗ್ಗ| ಬೈಕಿಗೆ ಲಾರಿ ಡಿಕ್ಕಿ; ಇಬ್ಬರು ಸಾವು, ಒಬ್ಬರು ಗಂಭೀರ

Prasthutha|

ಹೊಸನಗರ: ಬೈಕಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ ಘಟನೆ ಹೊಸನಗರ ತಾಲೂಕಿನ ಹುಲಿಕಲ್ ಘಾಟಿಯ ಲಕ್ಶ್ಮಿ ನರಸಿಂಹ ದೇವಸ್ಥಾನ ಸಮೀಪ ನಡೆದಿದೆ.

- Advertisement -


ಹೊಸನಗರ ಮಾಸ್ತಿಕಟ್ಟೆ ನಿವಾಸಿ ರವಿ ಮತ್ತು ಅಣ್ಣನ ಮೂರು ವರ್ಷದ ಮಗು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅಪಘಾತವಾದ ಕೂಡಲೇ ಲಾರಿಯೊಂದಿಗೆ ಚಾಲಕ ಪರಾರಿಯಾಗಿದ್ದಾನೆ. ಗಂಭೀರ ಗಾಯಗೊಂಡ ರವಿ ಅವರ ಪತ್ನಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಅಪಘಾತದಿಂದಾಗಿ ಹುಲಿಕಲ್ ಮಾಸ್ತಿಕಟ್ಟೆ- ಹೊಸಂಗಡಿ ನಡುವೆ ಭಾರೀ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸ್ಥಳಕ್ಕೆ ಆಂಬುಲೆನ್ಸ್ ಹಾಗೂ ಪೊಲೀಸರು ರಕ್ಷಣೆಗೆ ಧಾವಿಸಲಿಲ್ಲ ಎಂದು ಆರೋಪಿಸಿ ಭಾರೀ ಸಂಖ್ಯೆಯಲ್ಲಿ ನೆರೆದಿದ್ದ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ.

Join Whatsapp