Home ಟಾಪ್ ಸುದ್ದಿಗಳು ನಿಷೇಧಾಜ್ಞೆ ತೆರವು: ಸಹಜ ಸ್ಥಿತಿಯತ್ತ ಶಿವಮೊಗ್ಗ

ನಿಷೇಧಾಜ್ಞೆ ತೆರವು: ಸಹಜ ಸ್ಥಿತಿಯತ್ತ ಶಿವಮೊಗ್ಗ

ಶಿವಮೊಗ್ಗ: ಸಾವರ್ಕರ್ ಫ್ಲೆಕ್ಸ್ ವಿಚಾರದಲ್ಲಿ ನಡೆದ ಗಲಾಟೆಯ ಬಳಿಕ ಬೂದಿಮುಚ್ಚಿದ ಕೆಂಡದಂತಿದ್ದ ಶಿವಮೊಗ್ಗ ಸಹಜ ಸ್ಥಿತಿಗೆ ಮರಳುತ್ತಿದೆ.


ಸ್ವಾತಂತ್ರ್ಯ ದಿನ ನಗರದ ಎ ಎ ಸರ್ಕಲ್ ನಲ್ಲಿ ಸಾವರ್ಕರ್ ಭಾವಚಿತ್ರ ಹಾಕಿದ ಕಾರಣಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದರು. ಬಳಿಕ ಚಾಕು ಇರಿತ ಪ್ರಕರಣ ಕೂಡ ನಡೆದಿತ್ತು. ಶಾಂತಿ ಸುವ್ಯವಸ್ಥೆ ಕಾಪಾಡಲು ಶಿವಮೊಗ್ಗ ನಗರ ಹಾಗೂ ಭದ್ರಾವತಿಯಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿತ್ತು. ಇದರಿಂದಾಗಿ ಅಂಗಡಿಗಳು ಬಂದ್ ಆಗಿದ್ದವು. ಇದೀಗ ನಿಷೇಧಾಜ್ಞೆಯನ್ನು ತೆರವುಗೊಳಿಸಲಾಗಿದ್ದು, ಶಾಲಾ- ಕಾಲೇಜುಗಳು ಪುನರಾರಂಭಗೊಂಡಿವೆ. ಅಂಗಡಿ, ಮುಂಗಟ್ಟುಗಳು ಮತ್ತೆ ಆರಂಭವಾಗಿದೆ.

Join Whatsapp
Exit mobile version