Home ಟಾಪ್ ಸುದ್ದಿಗಳು ಶಿವಮೊಗ್ಗ : ಗಲಭೆ ಹಿನ್ನೆಲೆ; ದ್ವಿಚಕ್ರ ವಾಹನದಲ್ಲಿ ಇಬ್ಬರ ಓಡಾಟಕ್ಕೆ ಬ್ರೇಕ್

ಶಿವಮೊಗ್ಗ : ಗಲಭೆ ಹಿನ್ನೆಲೆ; ದ್ವಿಚಕ್ರ ವಾಹನದಲ್ಲಿ ಇಬ್ಬರ ಓಡಾಟಕ್ಕೆ ಬ್ರೇಕ್

ಸಾಂದರ್ಭಿಕ ಚಿತ್ರ

ಶಿವಮೊಗ್ಗ: ನಗರ ವ್ಯಾಪ್ತಿಯಲ್ಲಿ ಮುಂದಿನ ಮೂರು ದಿನಗಳ ಕಾಲ ದ್ವಿಚಕ್ರ ವಾಹನದಲ್ಲಿ ಇಬ್ಬರು ಸವಾರರ ಓಡಾಟ ನಿಷೇಧಿಸಲಾಗಿದೆ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.


ಸಾವರ್ಕರ್ ಫ್ಲೆಕ್ಸ್ ಅಳವಡಿಕೆ ವಿಚಾರವಾಗಿ ನಡೆದ ಗಲಾಟೆ ಹಾಗೂ ಚೂರಿ ಇರಿತ ಪ್ರಕರಣದ ಹಿನ್ನೆಲೆಯಲ್ಲಿ ಈ ನಿಯಮವನ್ನು ಜಾರಿಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಪದೇ ಪದೇ ಕೋಮು ಸೌಹಾರ್ದ ಕೆಡಿಸುವ ಘಟನೆಗಳು ನಡೆಯುತ್ತಿದ್ದು, ಚೂರಿ ಇರಿತದಂತಹ ಘಟನೆಗಳು ಮರುಕಳಿಸದಂತೆ ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ. ಆರೋಪಿಗಳು ಯಾರೇ ಆದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಬಗ್ಗೆಜಿಲ್ಲಾಧಿಕಾರಿಯೊಂದಿಗೆ ಸಮಾಲೋಚನೆ ನಡೆಸಿದ್ದು ಆರೋಪಿಗಳ ಆಸ್ತಿ ಮುಟ್ಟುಗೋಲಿನಂತಹ ಕ್ರಮಕ್ಕೂ ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.


ಚೂರಿ ಇರಿತ ಪ್ರಕರಣದಲ್ಲಿ ಬಂಧಿತ ಆರೋಪಿಗಳು ಯಾವುದಾದರೂ ಸಂಘಟನೆಗಳಿಗೆ ಸೇರಿದವರು ಎಂಬುದನ್ನು ಈಗಲೇ ಹೇಳಲು ಆಗುವುದಿಲ್ಲ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಪೂರ್ವ ವಲಯದ ವಿವಿಧ ಜಿಲ್ಲೆಗಳಿಂದ ಹೆಚ್ಚಿನ ಪೊಲೀಸ್ ಪಡೆ ಕರೆಸಲಾಗುತ್ತಿದೆ ಎಂದು ತಿಳಿಸಿದರು.

Join Whatsapp
Exit mobile version