Home ಟಾಪ್ ಸುದ್ದಿಗಳು ಶಿವಮೊಗ್ಗ: ಜಿಲ್ಲಾಧಿಕಾರಿಗಳಿಂದ ಗ್ರಾಮ ಭೇಟಿ; ಸಾರ್ವಜನಿಕರಿಗೆ ಪರಿಹಾರ ಭರವಸೆ

ಶಿವಮೊಗ್ಗ: ಜಿಲ್ಲಾಧಿಕಾರಿಗಳಿಂದ ಗ್ರಾಮ ಭೇಟಿ; ಸಾರ್ವಜನಿಕರಿಗೆ ಪರಿಹಾರ ಭರವಸೆ

ಶಿವಮೊಗ್ಗ: ಜಿಲ್ಲಾಧಿಕಾರಿಗಳ ನಡೆ- ಹಳ್ಳಿ ಕಡೆ ಕಂದಾಯ ಇಲಾಖೆ ಎಂಬ ಹೊಸ ಪರಿಕಲ್ಪನೆಯಡಿ ಪ್ರತಿ ತಿಂಗಳ 3ನೇ ಶನಿವಾರದಂದು ಜಿಲ್ಲಾಧಿಕಾರಿಗಳು ಗ್ರಾಮ ಭೇಟಿ ನೀಡಿ ವಾಸ್ತವ್ಯ ಮಾಡಲಿದ್ದಾರೆ.

ಇದರ ಅಂಗವಾಗಿ 21/05/2022 ರಂದು ಶನಿವಾರ ಬೆಳಗ್ಗೆ 11.00ಕ್ಕೆ ಹೊಸನಗರ ತಾಲೂಕು ಕೆರೆಹಳ್ಳಿ ಹೋಬಳಿ ಬೆಳ್ಳೂರು ಗ್ರಾಮ ಪಂಚಾಯತಿಯಲ್ಲಿ ಜಿಲ್ಲಾಧಿಕಾರಿಗಳು ಕಂದಾಯ ಮತ್ತು ಇತರೆ ಎಲ್ಲಾ ಇಲಾಖೆಯ ಎಲ್ಲಾ ಅಧಿಕಾರಿ/ಸಿಬ್ಬಂದಿಗಳೊಂದಿಗೆ ಸಾರ್ವಜನಿಕರನ್ನು ಭೇಟಿ ಮಾಡಿ ಕುಂದು ಕೊರತೆಗಳನ್ನು ಆಲಿಸಿ ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡು, ಹಳ್ಳಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

ಆದ್ದರಿಂದ ಗ್ರಾಮದ ಸಾರ್ವಜನಿಕರು ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ತಮ್ಮ ಅಹವಾಲುಗಳನ್ನು ತಮ್ಮ ಗ್ರಾಮದ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸಲ್ಲಿಸಿ, 21/05/2022 ರಂದು ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಅಪರ ಜಿಲ್ಲಾಧಿಕಾರಿ ಡಾ. ನಾಗೇಂದ್ರ ಎಫ್. ಹೊನ್ನಳ್ಳಿರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join Whatsapp
Exit mobile version