Home ಟಾಪ್ ಸುದ್ದಿಗಳು ಶಿವಮೊಗ್ಗ:ಯುವಕ ಆತ್ಮಹತ್ಯೆ; ಕಾರಣ ನಿಗೂಢ

ಶಿವಮೊಗ್ಗ:ಯುವಕ ಆತ್ಮಹತ್ಯೆ; ಕಾರಣ ನಿಗೂಢ

ಶಿವಮೊಗ್ಗ: ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದಿದೆ.

ಸಾಗರದ ಎಸ್.ಎನ್ ನಗರದ ನಿವಾಸಿ ನಾಗರಾಜ್ (23) ಮೃತ ದುರ್ದೈವಿ. ಗ್ಯಾಸ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದ ನಾಗರಾಜ್ ಮನೆಯಲ್ಲಿಯೇ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ನಾಗರಾಜ್ ನ ತಾಯಿ ಒಂದು ವರ್ಷದ ಹಿಂದೆ ತೀರಿಕೊಂಡಿದ್ದರು.

ಕಳೆದೆರಡು ದಿನಗಳ ಹಿಂದೆಯಷ್ಟೇ ಸ್ನೇಹಿತರ ಜೊತೆಗೆ ಖುಷಿಯಿಂದ ಜನ್ಮ ದಿನವನ್ನು ಆಚರಿಸಿಕೊಂಡಿದ್ದ ಈತ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣಗಳೇನು ಎಂದು ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.

Join Whatsapp
Exit mobile version