ರೈತರ ಹೋರಾಟದಲ್ಲಿ ತಮ್ಮ ನೋಟವನ್ನು ಯಾವುದೇ ಧರ್ಮಕ್ಕೆ ಸೀಮಿತಗೊಳಿಸಬೇಡಿ : ಶಿರೋಮಣಿ ಅಕಾಲಿದಳ ನಾಯಕ

Prasthutha|


- Advertisement -

ಫಾಸಿಲ್ಕಾ (ಪಂಜಾಬ್): ದೇಶದಲ್ಲಿ ನಡೆಯುತ್ತಿರುವ ರೈತರ ಹೋರಾಟದಲ್ಲಿ ತಮ್ಮ ನೋಟವನ್ನು ಯಾವುದೇ ಧರ್ಮಕ್ಕೆ ಸೀಮಿತಗೊಳಿಸಬೇಡಿ ಎಂದು ಶಿರೋಮಣಿ ಅಕಾಲಿ ದಳದ ಮುಖಂಡ ಸುಖ್ಬೀರ್ ಸಿಂಗ್ ಬಾದಲ್ ಹೇಳಿದ್ದಾರೆ. ಉತ್ತರ ಪ್ರದೇಶದಿಂದ ಕೇರಳ ತನಕ ರೈತರು ಹೋರಾಟದಲ್ಲಿ ಭಾಗವಹಿಸುತ್ತಿದ್ದಾರೆ. ಹೋರಾಟವನ್ನು ಬೇರೆ ಯಾವುದೇ ಧರ್ಮಕ್ಕೆ ಸೀಮಿತಗೊಳಿಸಬೇಡಿ ಎಂದು ಅವರು ಪ್ರಧಾನಿಯನ್ನು ಒತ್ತಾಯಿಸಿದ್ದಾರೆ. ಸ್ಥಳೀಯ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಅವರು ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದರು.

ಜನರಿಗೆ ಆಹಾರ ನೀಡುವ ಅನ್ನದಾತರಿಗಾಗಿ ಅವರು ಹೋರಾಡುತ್ತಿದ್ದಾರೆ. ಈ ಹೋರಾಟವನ್ನು ಕೇವಲ ಒಂದು ಧರ್ಮದ ಹೋರಾಟವೆಂದು ಚಿತ್ರಿಸುವುದು ಸರಿಯಲ್ಲ ಎಂದು ಅವರು ಹೇಳಿದ್ದಾರೆ. ಕೇಂದ್ರ ಸರ್ಕಾರ ಅಂಗೀಕರಿಸಿದ ಮೂರು ಕೃಷಿ ಕಾನೂನುಗಳ ವಿರುದ್ಧ 70 ದಿನಗಳ ಕಾಲ ನಡೆದ ಹೋರಾಟದಲ್ಲಿ ಪಂಜಾಬ್‌ನ ರೈತರು ಮುಂಚೂಣಿಯಲ್ಲಿದ್ದಾರೆ. ಅವರಲ್ಲಿ ಹೆಚ್ಚಿನವರು ಸಿಖ್ಖರು. ರಾಷ್ಟ್ರ ನಿರ್ಮಾಣದಲ್ಲಿ ಸಿಖ್ಖರು ಪ್ರಮುಖ ಪಾತ್ರ ವಹಿಸಿರುವ ಸಮುದಾಯ ಎಂದು ಪ್ರಧಾನಿ ನಿನ್ನೆ ರಾಜ್ಯಸಭೆಯಲ್ಲಿ ಹೇಳಿದ್ದರು. ಆದರೂ ಸಿಖ್ಖರ ವಿರುದ್ಧ ದೇಶ ಏನು ಮಾಡಿದೆ ಎಂದು ಪ್ರಧಾನಿ ಕೇಳಿದ್ದಾರೆ. ಖಲಿಸ್ತಾನಿಯರಿಂದ ರೈತರ ಮುಷ್ಕರ ನಡೆಸುತ್ತಿದ್ದಾರೆ ಎಂದು ಈ ಹಿಂದೆ ಬಿಜೆಪಿ ನಾಯಕರು ಹೇಳಿದ್ದರು. ಇದರ ವಿರುದ್ಧ ದೇಶದಲ್ಲಿ ತೀವ್ರ ಪ್ರತಿಭಟನೆ ನಡೆದಿತ್ತು.

Join Whatsapp