ಶಿರೂರು ಭೂಕುಸಿತ: ಸೇನಾ ತಂಡದಿಂದ ಶೋಧ ಕಾರ್ಯಾಚರಣೆ

Prasthutha|

ಶಿರೂರು: ಅಂಕೋಲಾ ತಾಲೂಕಿನ ಶಿರೂರು ಗ್ರಾಮದಲ್ಲಿ ಭೂಕುಸಿತ ಸಂಭವಿಸಿದ ಸ್ಥಳದಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಳ್ಳಲು ಬೆಳಗಾವಿಯಿಂದ ಮರಾಠಾ ಲೈಟ್ ಇನ್ಫೆಂಟ್ರಿ ರೆಜಿಮೆಂಟ್ ನ 44 ಸದಸ್ಯರ ತಂಡವನ್ನು ನಿಯೋಜಿಸಲಾಗಿದೆ.

- Advertisement -


ಅವಶೇಷಗಳ ನಡುವೆ ನಾಪತ್ತೆಯಾದ ವ್ಯಕ್ತಿಗಳನ್ನು ವಿಶೇಷವಾಗಿ ಕಾಸರಗೋಡು ಮೂಲದ ಅರ್ಜುನ್ ಗಾಗಿ ಶೋಧ ನಡೆಯುತ್ತಿದೆ. ಟ್ರಕ್ ಚಾಲಕ ಅರ್ಜುನ್ ಜೋಯಿಡಾ ತಾಲೂಕಿನ ಜಗಲಪೇಟೆಯಿಂದ ಮರವನ್ನು ಸಾಗಿಸುತ್ತಿದ್ದಾಗ ಆರು ದಿನಗಳ ಹಿಂದೆ ಈ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿತ್ತು. ಸ್ಥಳದಲ್ಲಿ ನಿಧಾನಗತಿಯ ರಕ್ಷಣಾ ಕಾರ್ಯಾಚರಣೆಗಳ ಬಗ್ಗೆ ಕೇರಳ ಮಾಧ್ಯಮಗಳಿಂದ ತೀವ್ರ ಟೀಕೆ ವ್ಯಕ್ತವಾದ ನಂತರ ಸೇನಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.


ಸೇನಾ ಘಟಕ ಇಲ್ಲಿಗೆ ಆಗಮಿಸಿದೆ. ನಮ್ಮಲ್ಲಿ ಎನ್ ಡಿಆರ್ ಎಫ್, ಎಸ್ ಡಿಆರ್ ಎಫ್ ಮತ್ತು ಸೇನಾ ಸಿಬ್ಬಂದಿ ಈಗ ಕೆಲಸ ಮಾಡುತ್ತಿದ್ದಾರೆ. ಶೀಘ್ರ ಫಲಿತಾಂಶ ಬರಲಿದೆ ಎಂದು ಭಾವಿಸುತ್ತೇವೆ ಎಂದು ಜಿಲ್ಲಾ ಆಡಳಿತದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.



Join Whatsapp