ಶಿರೂರು ಗುಡ್ಡ ಕುಸಿತ: ಅರ್ಜುನ್ ಲಾರಿಯ ಕ್ರ್ಯಾಶ್ ಗಾರ್ಡ್ ನದಿಯಲ್ಲಿ ಪತ್ತೆ..!

Prasthutha|

- Advertisement -

ಕಾರವಾರ: ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗಾವಳಿ ನದಿಯಲ್ಲಿ 3ನೇ ಹಂತದ ಶೋಧ ಕಾರ್ಯ ನಡೆಯುತ್ತಿದೆ. ಈ ವೇಳೆ ಕೇರಳದ ಚಾಲಕ ಅರ್ಜುನ್ ಓಡಿಸುತ್ತಿದ್ದ ಲಾರಿಗೆ ಅಳವಡಿಸಿದ್ದ ಕ್ರ್ಯಾಶ್ ಗಾರ್ಡ್ ಪತ್ತೆ ಆಗಿದೆ.

ಡ್ರೆಜ್ಜರ್ ಯಂತ್ರದ ಮೂಲಕ ಕಾರ್ಯಾಚರಣೆ ವೇಳೆ ಲಾರಿ ಕ್ರ್ಯಾಶ್ ಪತ್ತೆ ಆಗಿದೆ.

- Advertisement -

ಲಾರಿ ಕ್ರ್ಯಾಶ್ ಗಾರ್ಡ್ ಪತ್ತೆ ಹಿನ್ನೆಲೆಯಲ್ಲಿ ನಿವೃತ್ತ ಸೇನಾಧಿಕಾರಿ ಇಂದ್ರಬಾಲನ್​ ನಿರ್ದೇಶನದಂತೆ ಕಾರ್ಯಾಚರಣೆ ಮುಂದುವರೆದಿದೆ. ಹೀಗಾಗಿ ಶಾಸಕ ಸತೀಶ್ ಸೈಲ್ ಮತ್ತು ಎಸ್​ಪಿ ನಾರಾಯಣ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.

ಈ ಬಗ್ಗೆ ನಿವೃತ್ತ ಸೇನಾಧಿಕಾರಿ ಇಂದ್ರಬಾಲನ್​ ಪ್ರತಿಕ್ರಿಯಿಸಿದ್ದು, ನಾವು ಈ ಹಿಂದೆ ಸೂಚಿಸಿದ್ದ ಸ್ಥಳದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ಡ್ರೋನ್ ಕಾರ್ಯಾಚಾರಣೆಯಿಂದ ನಾಲ್ಕು ಪಾಯಿಂಟ್ ಗುರುತಿಸಿದ್ದೇವು. ನಮ್ಮ ತಂಡದ ಮಾಹಿತಿ ಪ್ರಕಾರ ನಾಲ್ಕನೇ ಪಾಯಿಂಟ್​​ನಲ್ಲಿ ಲಾರಿ ಇದೆ. ಈ ನಾಲ್ಕನೇ ಪಾಯಿಂಟ್ ನದಿಯ ಆಳದಲ್ಲಿ ಇದ್ದು ಅಲ್ಲಿ ಅಪಾರ ಮಣ್ಣು ಇದೆ ಎಂದಿದ್ದಾರೆ.



Join Whatsapp