ಶಿರೂರು ಗುಡ್ಡ ಕುಸಿತ: ನಾಪತ್ತೆಯಾಗಿದ್ದ ಟ್ರಕ್ ನದಿಯಲ್ಲಿ ಪತ್ತೆ; ಭರದಿಂದ ಸಾಗಿದ ಕಾರ್ಯಾಚರಣೆ

Prasthutha|

- Advertisement -

ಸ್ಥಳಕ್ಕೆ ಧಾವಿಸಿದ ಡಿಸಿ ಲಕ್ಷ್ಮೀಪ್ರಿಯಾ, ಎಸ್​‍ಪಿ ನಾರಾಯಣ

ಉತ್ತರ ಕನ್ನಡ: ಭಾರೀ ಮಳೆಯಿಂದಾಗಿ ಶಿರೂರು ಬಳಿ ಸಂಭವಿಸಿದ್ದ ಗುಡ್ಡ ಕುಸಿತ ದುರಂತದಲ್ಲಿ ಈವರೆಗೆ ಎಂಟು ಮಂದಿಯ ಮೃತದೇಹಗಳನ್ನು ಪತ್ತೆ ಮಾಡಲಾಗಿದೆ.

- Advertisement -

ಇನ್ನು ಈ ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಈಗ ಗುಡ್ಡದ ಮುಂಭಾಗದಲ್ಲಿರುವ ಗಂಗಾವಳಿಯಲ್ಲಿರುವುದು ಪತ್ತೆಯಾಗಿದೆ. ಈ ಬಗ್ಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರೇ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.

ದುರಂತ ಸಂಭವಿಸಿದ ಎಂಟು ದಿನಗಳು ಕಳೆದ ಬಳಿಕ ಟ್ರಕ್ ಪತ್ತೆಯಾಗಿದ್ದು, ಕಾರ್ಯಚರಣೆ ತೀವ್ರಗೊಂಡಿದೆ. ಆದ್ರೆ, ಚಾಲಕ ಅರ್ಜುನ್ ಟ್ರಕ್​ನಲ್ಲಿ ಸಿಲುಕಿಕೊಂಡಿದ್ದಾರಾ ಅಥವಾ ನದಿಯಲ್ಲಿ ಕೊಚ್ಚಿ ಹೋಗಿದ್ದಾರಾ ಎನ್ನುವುದು ಇನ್ನು ತಿಳಿದುಬಂದಿಲ್ಲ. ಸದ್ಯಕ್ಕೆ ನದಿಯಿಂದ ಟ್ರಕ್​ ಮೇಲೆತ್ತುವ ಕಾರ್ಯ ಭರದಿಂದ ಸಾಗಿದೆ.

ಸ್ಥಳಕ್ಕೆ ಧಾವಿಸಿದ ಡಿಸಿ ಲಕ್ಷ್ಮೀಪ್ರಿಯಾ ಹಾಗೂ ಎಸ್​ಪಿ ನಾರಾಯಣ
ಇಂದು ಗಂಗಾವಳಿ ನದಿಯಲ್ಲಿ ಬೂಮ್ ಫೋಕ್ಲೇನ್ ಮೂಲಕ ಕಾರ್ಯಾಚರಣೆ ನಡೆಸಲಾಗಿದ್ದು, ಕಾರ್ಯಾಚರಣೆ ವೇಳೆ ಫೋಕ್ಲೇನ್ ಬಕೆಟ್​ಗೆ ಕಬ್ಬಿಣ ಬಡಿದಿದೆ. ಈ ಹಿನ್ನಲೆ ನದಿಯಲ್ಲಿ ವಾಹನ ಒಂದು ಇರುವುದು ಖಚಿತ ಆಗುತ್ತಿದ್ದಂತೆ, ಸ್ಥಳಕ್ಕೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಹಾಗೂ ಎಸ್ಪಿ ನಾರಾಯಣ ಧಾವಿಸಿದ್ದಾರೆ. ಇದೀಗ ಕಾರ್ಯಾಚರಣೆ ತಿವ್ರಗೊಂಡಿದೆ.

ಈ ಕುರಿತು ಮಾತನಾಡಿದ ಶಾಸಕ ಸತೀಶ್ ಸೈಲ್, ‘ಲಾರಿ ಇದೆ ಎನ್ನಲಾದ ಸ್ಥಳಕ್ಕೆ ಹೊಗಿ ಬಂದಿದ್ದೇನೆ. ಅಧಿಕಾರಿಗಳು ಲಾರಿ ಇದೆ ಎನ್ನಲಾಗುತ್ತಿದೆ. ಆದರೆ, ನಮಗೆ ಗಾಡಿ ಇರುವುದು ಕಾಣಿಸುತ್ತಿಲ್ಲ ಎಂದಿದ್ದಾರೆ.



Join Whatsapp