ವಿಮಾನ ನಿಲ್ದಾಣದ ಅದಾನಿ ನಾಮಫಲಕವನ್ನು ಧ್ವಂಸಗೊಳಿಸಿದ ಶಿವಸೇನಾ ಕಾರ್ಯಕರ್ತರು

Prasthutha|

ಮುಂಬೈ: ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೆಸರನ್ನು ಬದಲಾಯಿಸಿ ಅದಾನಿ ವಿಮಾನ ನಿಲ್ದಾಣ ಎಂದು ಹಾಕಲಾಗಿದ್ದ ನಾಮಫಲಕವನ್ನು ಶಿವಸೇನಾ ಕಾರ್ಯಕರ್ತರು ಧ್ವಂಸಗೊಳಿಸಿದ್ದಾರೆ.

- Advertisement -

ಮಹಾರಾಷ್ಟ್ರದ ಆಡಳಿತಾರೂಢ ಮಹಾ ವಿಕಾಸ ಅಘಾಡಿ ಮೈತ್ರಿಕೂಟದ ಶಿವಸೇನೆಯು ಮುಂಬೈ ವಿಮಾನ ನಿಲ್ದಾಣವನ್ನು ಅದಾನಿ ಗ್ರೂಪ್ ಎಂದು ಮರುನಾಮಕರಣ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದೆ. ಪ್ರಸ್ತುತ ಛತ್ರಪತಿ ಶಿವಾಜಿ ಮಹಾರಾಜ್ ವಿಮಾನ ನಿಲ್ದಾಣದ ಹೆಸರನ್ನು ಬದಲಾಯಿಸುವ ಹಕ್ಕು ಅದಾನಿ ಸಮೂಹಕ್ಕೆ ಇಲ್ಲ ಎಂದು ಶಿವಸೇನೆ ಹೇಳಿದೆ.

ಈ ವರ್ಷದ ಜುಲೈನಲ್ಲಿ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ನಿಯಂತ್ರಣವನ್ನು ಜಿವಿಕೆ ಗ್ರೂಪ್ ನಿಂದ ಅದಾನಿ ಗ್ರೂಪ್ ವಹಿಸಿಕೊಂಡಿತ್ತು. ಅದಾನಿ ಗ್ರೂಪ್ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಶೇ. 74 ರಷ್ಟು ಪಾಲನ್ನು ಹೊಂದಿದೆ.

Join Whatsapp