ಶಿವಾಜಿ ಪ್ರತಿಮೆ ಕುಸಿತ ಪ್ರಕರಣ: ವಿನ್ಯಾಸಗಾರ ಚೇತನ್ ಪಾಟೀಲ್ ಬಂಧನ

Prasthutha|

ಮುಂಬೈ: ಸಿಂಧುದುರ್ಗ ಜಿಲ್ಲೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಕುಸಿದುಬಿದ್ದ ಪ್ರಕರಣ ಸಂಬಂಧ, ಪ್ರತಿಮೆಯ ವಿನ್ಯಾಸಗಾರ ಚೇತನ್ ಪಾಟೀಲ್ ಅವರನ್ನು ಕೊಲ್ಹಾಪುರದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -


ಪಾಟೀಲ್ ಅವರನ್ನು ಗುರುವಾರ ತಡರಾತ್ರಿ ವಶಕ್ಕೆ ಪಡೆದು ಹೆಚ್ಚಿನ ತನಿಖೆಗಾಗಿ ಸಿಂಧುದುರ್ಗ ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ಕೊಲ್ಹಾಪುರ ಪೊಲೀಸ್ ವರಿಷ್ಠಾಧಿಕಾರಿ ಮಹೇಂದ್ರ ಪಂಡಿತ್ ತಿಳಿಸಿದ್ದಾರೆ.


ಶಿವಾಜಿ ಪ್ರತಿಮೆ ಕುಸಿದುಬಿದ್ದ ಘಟನೆ ಸಂಬಂಧ, ಪ್ರತಿಮೆ ನಿರ್ಮಾಣದ ಗುತ್ತಿಗೆದಾರ ಹಾಗೂ ವಿನ್ಯಾಸಗಾರನ ವಿರುದ್ಧ ಮಂಗಳವಾರ ಪೊಲೀಸರು ಪ್ರಕರಣ ದಾಖಲಿಸಿದ್ದರು.



Join Whatsapp
Exit mobile version