ಶಿವಾಜಿ ಪ್ರತಿಮೆ ಕುಸಿತ: ಕ್ಷಮೆಯಾಚಿಸಿದ ಪ್ರಧಾನಿ ಮೋದಿ

Prasthutha|

ನವದೆಹಲಿ: ರಾಜ್ ಕೋಟ್ ಕೋಟೆಯಲ್ಲಿ ಛತ್ರಪತಿ ಶಿವಾಜಿ ಅವರ ಪ್ರತಿಮೆ ಕುಸಿತವಾಗಿರುವುದಕ್ಕೆ ಪ್ರಧಾನಿ ಮೋದಿ ಕ್ಷಮೆಯಾಚಿಸಿದ್ದಾರೆ.

- Advertisement -


ನಾನು ಇಲ್ಲಿಗೆ ಬಂದಿಳಿದ ಕ್ಷಣದಲ್ಲಿ, ಪ್ರತಿಮೆ ಕುಸಿತದ ಬಗ್ಗೆ ನಾನು ಮೊದಲು ಛತ್ರಪತಿ ಶಿವಾಜಿ ಬಳಿ ಕ್ಷಮೆಯಾಚಿಸಿದೆ.


ಪ್ರತಿಮೆ ಕುಸಿತದಿಂದ ನೊಂದಿರುವ ಜನರಲ್ಲಿ ನಾನು ಕ್ಷಮೆಯಾಚಿಸುತ್ತೇನೆ ಎಂದು ಮಹಾರಾಷ್ಟ್ರದ ಪಾಲ್ಘರ್ನಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ.

- Advertisement -


ಛತ್ರಪತಿ ಶಿವಾಜಿ ಮಹಾರಾಜರನ್ನು ತಮ್ಮ ಆರಾಧ್ಯ ದೈವವೆಂದು ಪರಿಗಣಿಸುವವರು ಮತ್ತು ಘಟನೆಯಿಂದ ತೀವ್ರವಾಗಿ ನೊಂದಿರುವವರ ಬಳಿ ನಾನು ತಲೆಬಾಗಿ ಕ್ಷಮೆಯಾಚಿಸುತ್ತೇನೆ. ನಮ್ಮ ಮೌಲ್ಯಗಳು ವಿಭಿನ್ನವಾಗಿವೆ. ಇದಕ್ಕಿಂತ ದೊಡ್ಡದು ಏನು ಇಲ್ಲ ಎಂದು ಮೋದಿ ತಿಳಿಸಿದ್ದಾರೆ.



Join Whatsapp
Exit mobile version