ಅನುಮತಿಯಿಲ್ಲದೆ ಶಿವಾಜಿ ಪುತ್ಥಳಿ ಸ್ಥಾಪಿಸಿದ್ದ ಸಂಘಪರಿವಾರ : ತೆರವುಗೊಳಿಸಿದ ಬಾಗಲಕೋಟೆ ನಗರಸಭೆ

Prasthutha|

ಬಾಗಲಕೋಟೆ: ನಗರದ ಸೋನಾರ ಬಡಾವಣೆಯಲ್ಲಿ ಅನುಮತಿಯಿಲ್ಲದೆ ಸಂಘಪರಿವಾರ ಪ್ರತಿಷ್ಠಾಪನೆ ಮಾಡಿರುವ ಶಿವಾಜಿ ಪುತ್ಥಳಿಯನ್ನು ಜೆಸಿಬಿ ಮೂಲಕ ನಗರಸಭೆ ಸಿಬ್ಬಂದಿ ಸ್ಥಳಾಂತರಿಸಿದ್ದಾರೆ.

- Advertisement -

ಡಿಸಿ ಆದೇಶದ ಮೇರೆಗೆ ಪ್ರತಿಮೆ ಸ್ಥಳಾಂತರಿಸಲಾಗಿದ್ದು, ಟಾಟಾ ಏಸ್ ವಾಹನದಲ್ಲಿ ಶಿವಾಜಿ ಪ್ರತಿಮೆಯನ್ನು ನಗರಸಭೆ ಸಿಬ್ಬಂದಿ ಸಾಗಿಸಿದ್ದಾರೆ. ಈ ವೇಳೆ ವಿರೋಧಿಸಿ ಸಂಘಪರಿವಾರದ ಕಾರ್ಯಕರ್ತರು ಪ್ರತಿಭಟಿಸಿದ್ದಾರೆ. ಇನ್ನು ಮುಂಜಾಗ್ರತಾ ಕ್ರಮವಾಗಿ ಆಗಸ್ಟ್​ 18ರ ಮಧ್ಯರಾತ್ರಿ 12ರವರೆಗೆ ಬಾಗಲಕೋಟೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಬಾಗಲಕೋಟೆ ಡಿಸಿ ಕೆ.ಎಂ.ಜಾನಕಿ ಆದೇಶ ಹೊರಡಿಸಿದ್ದಾರೆ.

ಪುತ್ಥಳಿ ತೆರವುಗೊಳಿಸದಂತೆ ಬಿಜೆಪಿ, ಸಂಘಪರಿವಾರದ ಕಾರ್ಯಕರ್ತರ ಪಟ್ಟು ಹಿಡಿದಿದ್ದು, ಪ್ರತಿಭಟನೆ ನಡೆಸಿದ್ದರು. ಶಿವಾಜಿ ಪುತ್ಥಳಿ ಇರುವ ಸ್ಥಳದಲ್ಲೇ ಪೊಲೀಸ್ ಬಿಗಿ ಬಂದೋಬಸ್ತ್​ ಒದಗಿಸಲಾಗಿದ್ದು, 3 DAR, 1 KSRP ತುಕಡಿ ಸೇರಿ 100ಕ್ಕೂ ಹೆಚ್ಚು ನಿಯೋಜನೆ ಮಾಡಲಾಗಿದೆ. ಜತೆಗೆ ಪುತ್ಥಳಿ ಇರುವ ಸ್ಥಳದಲ್ಲಿ ಸಿಸಿಕ್ಯಾಮರಾ ಅಳವಡಿಸಲಾಗಿದೆ.

- Advertisement -

15 ಕ್ಕೂ ಅಧಿಕ ಜನರು ವಶಕ್ಕೆ

ಪ್ರತಿಭಟನಾನಿರತರನ್ನು ಹತೋಟಿಗೆ ತರಲು ಎಸ್​ಪಿ, ಪೊಲೀಸರು ಯತ್ನಿಸಿದ್ದು, ಎಸ್​ಪಿ ಜಯಪ್ರಕಾಶ್ ಜತೆ ಮಾತಿನಚಕಮಕಿ ಉಂಟಾಗಿದೆ. ಈ ವೇಳೆ 15 ಕ್ಕೂ ಅಧಿಕ ಪ್ರತಿಭಟನಾಕಾರರನ್ನು ಬಾಗಲಕೋಟೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Join Whatsapp