ಶಿವಮೊಗ್ಗ ಸ್ಫೋಟ ಪ್ರಕರಣ| 7 ತಿಂಗಳ ಬಳಿಕ ಮೃತದೇಹದ ಗುರುತು ಪತ್ತೆ!

Prasthutha|

ಶಿವಮೊಗ್ಗ: ಶಿವಮೊಗ್ಗ ಕಲ್ಲಗಂಗೂರು ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಭಾರಿ ಸ್ಫೋಟದಲ್ಲಿ ಮೃತಪಟ್ಟ ವ್ಯಕ್ತಿಯ ಗುರುತನ್ನು ಪ್ರಕರಣ ಸಂಭವಿಸಿ ಏಳೂವರೆ ತಿಂಗಳ ಬಳಿಕ ಪತ್ತೆ ಮಾಡಲಾಗಿದೆ.

- Advertisement -

ಕಲ್ಲಗಂಗೂರು ಕ್ವಾರಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಒಟ್ಟು ಆರು ಮಂದಿ ಮೃತಪಟ್ಟಿದ್ದು ಐವರ ಗುರುತು ಪತ್ತೆ ಹಚ್ಚಿ ಮೃತದೇಹಗಳನ್ನು ಹಸ್ತಾಂತರ ಮಾಡಲಾಗಿತ್ತು. ಆದರೆ ಆರನೆ ವ್ಯಕ್ತಿಯ ದೇಹ ಸಂಪೂರ್ಣ ಛಿದ್ರವಾಗಿದ್ದ ಹಿನ್ನೆಲೆ ಗುರುತು ಪತ್ತೆ ಮಾಡುವುದಕ್ಕೆ ಸಾಧ್ಯವಾಗಿರಲಿಲ್ಲ. ಈಗ ಆತನ ಗುರುತು ಪತ್ತೆಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮೃತನನ್ನು ಭದ್ರಾವತಿಯ ಕೆ.ಹೆಚ್.ನಗರದ ಆಟೋ ಚಾಲಕ ಶಶಿ (32) ಎಂದು ತಿಳಿದು ಬಂದಿದೆ.

ಕಲ್ಲು ಕ್ವಾರಿ ಸ್ಫೋಟದ ನಂತರದಲ್ಲಿ ಛಿದ್ರವಾಗಿದ್ದ ದೇಹದ ಭಾಗಗಳನ್ನು ವಶಕ್ಕೆ ಪಡೆದ ಪೊಲೀಸರು ಅವುಗಳನ್ನು ಡಿಎನ್‌ಎ ಪರೀಕ್ಷೆಗೆ ಒಳಪಡಿಸಿದ್ದರು.

- Advertisement -

ಕಲ್ಲಗಂಗೂರು ಗ್ರಾಮದ ಸರ್ವೇ ನಂಬರ್ 2ರಲ್ಲಿರುವ ಎಸ್.ಎಸ್.ಕ್ರಷರ್ ಬಳಿ ಕಳೆದ 2021ರ ಜನವರಿ 21ರ ರಾತ್ರಿ ಭಾರಿ ಪ್ರಮಾಣದ ಸ್ಪೋಟಕ ಸ್ಫೋಟಗೊಂಡಿತ್ತು.

Join Whatsapp