Home ಟಾಪ್ ಸುದ್ದಿಗಳು ಶಿವಮೊಗ್ಗ ಹಿಂಸಾಚಾರ: ಗಲಭೆಕೋರರಿಂದ ನಷ್ಟ ಪರಿಹಾರಕ್ಕೆ ಕಾಂಗ್ರೆಸ್ ಒತ್ತಾಯ

ಶಿವಮೊಗ್ಗ ಹಿಂಸಾಚಾರ: ಗಲಭೆಕೋರರಿಂದ ನಷ್ಟ ಪರಿಹಾರಕ್ಕೆ ಕಾಂಗ್ರೆಸ್ ಒತ್ತಾಯ

ಬೆಂಗಳೂರು: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಯ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ನಡೆದ ಹಿಂಸಾಚಾರದ ವೇಳೆ ಉಂಟಾಗಿರುವ ಆಸ್ತಿ ಹಾನಿಯ ನಷ್ಟ ಪರಿಹಾರವನ್ನು ಗಲಭೆಕೋರರಿಂದ ವಸೂಲಿ ಮಾಡುವಂತೆ ರಾಜ್ಯ ಸರ್ಕಾರವನ್ನುಕಾಂಗ್ರೆಸ್ ಒತ್ತಾಯಿಸಿದೆ.

ಹಿಂಸಾಚಾರದ ವೇಳೆ ಆಸ್ತಿಪಾಸ್ತಿ ಕಳೆದುಕೊಂಡವರಿಗೆ ಸರ್ಕಾರ ಪರಿಹಾರ ನೀಡಬೇಕು. ಗಲಭೆಕೋರರ ಬಳಿ ವಸೂಲಿ ಮಾಡಿದಂತೆಯೇ ಶವಯಾತ್ರೆಯ ನೇತೃತ್ವ ವಹಿಸಿದ್ದ ಸಚಿವ ಕೆ.ಎಸ್.ಈಶ್ವರಪ್ಪರಿಂದಲೂ ನಷ್ಟ ಪರಿಹಾರ ವಸೂಲಿ ಮಾಡಬೇಕು. ಒಬ್ಬ ಸಚಿವರಾಗಿ ಜನರಿಗೆ ಪ್ರಚೋದನೆ ನೀಡುವ ಕೆಲಸ ಮಾಡಿದ್ದಾರೆ. ಗಲಭೆಯಲ್ಲಿ ಭಾಗಿಯಾಗಿದ್ದವರು ಯಾರು ಎಂಬುದನ್ನು ಸಾಬೀತುಪಡಿಸಲು ಸಾಕಷ್ಟು ವೀಡಿಯೋಗಳಿವೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಧ್ರುವನಾರಾಯಣ್ ”ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಶಿವಮೊಗ್ಗದಲ್ಲಿ ಒಂದು ವಾರದಲ್ಲಿ ಎರಡು ಜೋಡಿ ಕೊಲೆಗಳು ಸಹಿತ ಒಂದು ತಿಂಗಳ ಅವಧಿಯಲ್ಲಿ ಸುಮಾರು ಆರು ಕೊಲೆಗಳು ನಡೆದಿವೆ. ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ತವರು ಮತ್ತು  ಸಚಿವ ಕೆ ಎಸ್ ಈಶ್ವರಪ್ಪ ಅವರ ತವರು ಕ್ಷೇತ್ರದಲ್ಲಿ ಗುಪ್ತಚರ ಮತ್ತು ಪೊಲೀಸ್ ಇಲಾಖೆಯ ಸಂಪೂರ್ಣ ವಿಫಲವಾಗಿದೆ ಎಂದು ಹೇಳಿದರು.

Join Whatsapp
Exit mobile version