ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರಿಡಲು ತೀರ್ಮಾನ: ಸಿಎಂ ಬೊಮ್ಮಾಯಿ

Prasthutha|

ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹೆಸರು ಇಡಲು ನಿರ್ಧರಿಸಿರುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ‌ ಹೇಳಿಕೆ ನೀಡಿದ್ದಾರೆ.

- Advertisement -

ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಣೆ ನಂತರ ಮಾತನಾಡಿದ ಅವರು, ರಾಜ್ಯದ ಆರ್ಥಿಕ ಅಭಿವೃದ್ಧಿ ಆಗಬೇಕಾದರೆ ಮೂಲಭೂತ ಸೌಲಭ್ಯಗಳು ಮುಖ್ಯ.ಇದರಿಂದ ಆರ್ಥಿಕ ಬೆಳವಣಿಗೆ ಸಹ ಆಗುತ್ತದೆ. ಶಿವಮೊಗ್ಗ, ಬಿಜಾಪುರದಲ್ಲಿ ಏರ್ ಪೋರ್ಟ್ ಕೆಲಸ ನಡೆಯುತ್ತಿದೆ. ರಾಯಚೂರಿನಲ್ಲಿ ಈ ವರ್ಷದಿಂದ ಕಾಮಗಾರಿ ಆರಂಭವಾಗುತ್ತದೆ. ಕಾರವಾರದಲ್ಲಿ ನೇವಿ ಏರ್ ಪೋರ್ಟ್ ಕಾಮಗಾರಿ ನಡೆಯುತ್ತಿದೆ ಎಂದು ಹೇಳಿದರು.

Join Whatsapp