Home ಕರಾವಳಿ ತುಳು ದೈವಾರಾಧನೆ ನಿಂದನೆ ಮಾಡಿದ ಆರೋಪಿ ಶಿವರಾಜ್ ಸೆರೆ

ತುಳು ದೈವಾರಾಧನೆ ನಿಂದನೆ ಮಾಡಿದ ಆರೋಪಿ ಶಿವರಾಜ್ ಸೆರೆ

ಮಂಗಳೂರು: ಮಂಗಳೂರು: ತುಳುನಾಡಿನ ದೈವಾರಾಧನೆ ನಿಂದನೆ ಮತ್ತು ಮಹಿಳೆಯರ ಬಗ್ಗೆ ಆಶ್ಲೀಲ ಚಿತ್ರಗಳನ್ನು ಪೋಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಸೈಬರ್ ಕ್ರೈಂ ಠಾಣಾ ಪೋಲಿಸರು ಬಂಧಿಸಿದ್ದಾರೆ.


ಬೆಂಗಳೂರು ಉತ್ತರ ಜಿಲ್ಲೆಯ ಶಿವರಾಜ್ ಹೆಚ್.ಕೆ. (37) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.


2022ರಲ್ಲಿ ನಕಲಿ ಟ್ವೀಟ್ ಖಾತೆಯೊಂದರಲ್ಲಿ ತುಳುನಾಡಿನ ದೈವರಾಧನೆ ಮತ್ತು ಮಹಿಳೆಯರ ಬಗ್ಗೆ ಅಶ್ಲೀಲವಾಗಿ ಪೋಸ್ಟ್ ಮಾಡಲಾಗಿತ್ತು ಎನ್ನಲಾಗಿದ್ದು, ಈ ಬಗ್ಗೆ ತುಳುನಾಡಿನ ದೈವಾರಾಧನೆ ಸಂರಕ್ಷಣಾ ಯುವ ವೇದಿಕೆಯು ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಿಸಿತ್ತು ಎಂದು ತಿಳಿದು ಬಂದಿದೆ.

Join Whatsapp
Exit mobile version