ರೈತರು ರಸ್ತೆಯಲ್ಲಿ ಅಡುಗೆ ಮಾಡುವುದು ನೋಡಿದರೆ ಹೊಟ್ಟೆ ಉರಿಯುತ್ತೆ : ನಟ ಶಿವರಾಜ್ ಕುಮಾರ್

Prasthutha|

ಬೆಂಗಳೂರು : ಬಿಜೆಪಿ ಸರಕಾರದ ನೂತನ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಕಳೆದ ಎರಡು ತಿಂಗಳುಗಳಿಗಿಂತಲೂ ಹೆಚ್ಚು ಕಾಲದಿಂದ ದೆಹಲಿ ಗಡಿ ಭಾಗಗಳಲ್ಲಿ ಕೊರೆವ ಚಳಿಯನ್ನೂ ಲೆಕ್ಕಿಸದೆ ರೈತರು ನಡೆಸುತ್ತಿರುವ ಹೋರಾಟಕ್ಕೆ ಜನಪ್ರಿಯ ಕನ್ನಡ ನಟ ಶಿವರಾಜ್ ಕುಮಾರ್ ಬೆಂಬಲಿಸಿದ್ದಾರೆ.

- Advertisement -

ರೈತರು ರಸ್ತೆಯಲ್ಲಿ ಅಡುಗೆ ಮಾಡೋದು, ಕಷ್ಟ ಪಡೋದು ನೋಡಿದರೆ ಹೊಟ್ಟೆ ಉರಿಯುತ್ತಿದೆ ಎಂದು ಶಿವರಾಜ್ ಕುಮಾರ್ ಹೇಳಿದ್ದಾರೆ.

ರೈತ ಹೋರಾಟದ ಬಗ್ಗೆ ನಾವ್ಯಾರೂ ಹೇಳಿಕೆ ನೀಡುತ್ತಿಲ್ಲ ಎನ್ನುತ್ತಾರೆ. ಆದರೆ, ನಮ್ಮಿಂದ, ಇಂಡಸ್ಟ್ರಿಯಿಂದ ಅಥವಾ ಭಾರತೀಯ ಸಿನೆಮಾ ರಂಗ ಬೀದಿಗೆ ಇಳಿಯೋದ್ರಿಂದ ಸಮಸ್ಯೆ ಬಗೆಹರಿಯಲ್ಲ. ಹಾಗೆ ಆಗೋದಾದ್ರೆ ನಾವು ಬೀದಿಗಿಳಿಯಲೂ ಸಿದ್ಧ ಎಂದು ಶಿವಣ್ಣ ಹೇಳಿರುವುದಾಗಿ ವರದಿಯೊಂದು ತಿಳಿಸಿದೆ.

- Advertisement -

ರೈತರ ಸಮಸ್ಯೆಯನ್ನು ಸರಕಾರವೇ ಬಗೆ ಹರಿಸಬೇಕು. ಈ ಬಗ್ಗೆ ಸರಕಾರ ಗಮನ ಹರಿಸಬೇಕು. ನಮ್ಮ ಸಮಸ್ಯೆಗಳನ್ನೇ ನಾವು ಪರಿಹಾರ ಮಾಡಿಕೊಳ್ಳೋಕೆ ಆಗ್ತಿಲ್ಲ. ಅಂತಹುದರಲ್ಲಿ ನಮ್ಮ ಕೈಯಲ್ಲಿ ಏನಿದೆ? ರೈತರು ಏನೇ ಮಾಡಿದರೂ, ಅದಕ್ಕೆ ನಮ್ಮ ಬೆಂಬಲ ಇದೆ. ನಮ್ಮ ಕೈಯಲ್ಲಿ ಅಧಿಕಾರ ಇದ್ದಿದ್ರೆ ಎಲ್ಲವನ್ನೂ ಬರೆದು ಕೊಡ್ತಿದ್ದೆ ಎಂದು ಶಿವರಾಜ್ ಕುಮಾರ್ ಹೇಳಿದ್ದಾರೆ.

Join Whatsapp