Home ಟಾಪ್ ಸುದ್ದಿಗಳು ಕಾಂಗ್ರೆಸ್​ ಗೆ ಸೇರಲ್ಲ ಎಂದ ಮರುದಿನವೇ ಸಿಎಂ ಸಿದ್ದರಾಮಯ್ಯರನ್ನ ಭೇಟಿಯಾದ ಶಿವರಾಮ್​ ಹೆಬ್ಬಾರ್

ಕಾಂಗ್ರೆಸ್​ ಗೆ ಸೇರಲ್ಲ ಎಂದ ಮರುದಿನವೇ ಸಿಎಂ ಸಿದ್ದರಾಮಯ್ಯರನ್ನ ಭೇಟಿಯಾದ ಶಿವರಾಮ್​ ಹೆಬ್ಬಾರ್

ಬೆಂಗಳೂರು: ಕಾಂಗ್ರೆಸ್​ ಗೆ ಸೇರಲ್ಲ ಎಂದ ಮರುದಿನವೇ ಯಲ್ಲಾಪುರ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ್​ ಹೆಬ್ಬಾರ್ ಶುಕ್ರವಾರ ರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು ಸಾಕಷ್ಟು ಕುತೂಹಲ ಮೂಡಿಸಿದೆ.

ಸಿಎಂ ಜೊತೆ ಹೆಬ್ಬಾರ್​ ಸುಮಾರು ಒಂದೂವರೆ ಗಂಟೆಗಳ ಕಾಲ ಚರ್ಚೆ ನಡೆಸಿದ್ದು, ರಾಜ್ಯ ರಾಜಕೀಯದಲ್ಲಿ ಮೊತ್ತೊಂದು ಸಂಚಲನ ಮೂಡಿಸಿದೆ.

ಕ್ಷೇತ್ರದಲ್ಲಿ ಶೇ 70 ಕ್ಕಿಂತ ಕಡಿಮೆ ಮಳೆ ಆಗಿರುವ ಹಿನ್ನಲೆಯಲ್ಲಿ ಬರಪೀಡಿತ ತಾಲೂಕು ಘೋಷಣೆಗೆ ಮನವಿ ಮಾಡಲಾಗಿದೆ. ಯಲ್ಲಾಪುರ – ಮುಂಡಗೋಡ – ಶಿರಸಿ ಭಾಗದ ಬನವಾಸಿಯನ್ನು ಬರಪೀಡಿತ ಎಂದು ಘೋಷಿಸಿ. ಮಳೆಯಿಲ್ಲದೆ ರೈತರು ಸಂಕಷ್ಟದಲ್ಲಿದ್ದಾರೆ. ಕ್ಷೇತ್ರಕ್ಕೆ ಹೆಚ್ಚಿನ ಅನುಧಾನ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

Join Whatsapp
Exit mobile version