ಅನರ್ಹಗೊಂಡರೆ ಕಾಂಗ್ರೆಸ್ ಸೇರುವುದಾಗಿ ಪರೋಕ್ಷ ಸುಳಿವು ನೀಡಿದ ಶಿವರಾಮ್ ಹೆಬ್ಬಾರ್

Prasthutha|

ಕಾರವಾರ: ಕಾಂಗ್ರೆಸ್ ಪಕ್ಷಕ್ಕೆ ಸೇರುವುದನ್ನು ಕಾಲ ನಿರ್ಣಯಿಸಲಿದೆ ಎನ್ನುವ ಮೂಲಕ ಬಿಜೆಪಿ ಪಕ್ಷದಿಂದ ಅನರ್ಹಗೊಂಡರೆ ಕಾಂಗ್ರೆಸ್ ಪಕ್ಷ ಸೇರುವ ಕುರಿತು ಪರೋಕ್ಷವಾಗಿ ಯಲ್ಲಾಪುರ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಸುಳಿವು ನೀಡಿದ್ದಾರೆ.

- Advertisement -

ಮುಂಡಗೋಡಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಹೆಬ್ಬಾರ್, ಈ ಸುಳಿವು ನೀಡಿದ್ದಾರೆ. ರಾಜ್ಯಸಭೆ ಚುನಾವನೆಗೆ ಗೈರು ಆಗಿದ್ದಕ್ಕೆ ಬಿಜೆಪಿಯವರು ನೋಟಿಸ್ ನೀಡಿದ್ದಾರೆ. ನಾನು ರಾಜ್ಯಸಭಾ ಚುನಾವಣೆಯ ಮತದಾನಕ್ಕೆ ಗೈರು ಆಗಿರುವ ಕುರಿತು ಸಮರ್ಪಕ ಉತ್ತರ ನೀಡಿದ್ದೇನೆ. ಅನರ್ಹ ಮಾಡುವುದು ಬಿಡುವುದು ಪಕ್ಷದ ನಿರ್ಣಯ ಎಂದು ತಿಳಿಸಿದ್ದಾರೆ.

ಸಂಸದ ಅನಂತಕುಮಾರ ಹೆಗ್ಡೆ ವಿವಾದಾತ್ಮಕ ಹೇಳಿಕೆ ಸಂಬಂಧ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅವರ ಹೇಳಿಕೆಗೆ ಜನರೇ ಉತ್ತರ ನೀಡುತ್ತಿದ್ದಾರೆ. ಅನಂತಕುಮಾರ ಹೆಗ್ಡೆ ಒಬ್ಬ ದೊಡ್ಡ ಮನುಷ್ಯ. ಅವರ ಬಗ್ಗೆ ನಾನು ಬಗ್ಗೆ ನಾನು ಪ್ರತಿಕ್ರಿಯಿಸಲಾರೆ ಎಂದರು. ಇದೇ ವೇಳೆ ಹೆಬ್ಬಾರ್ ಸಚಿವ ರಾಮಲಿಂಗಾರೆಡ್ಡಿ ಬಗ್ಗೆ ಹಾಡಿ ಹೊಗಳಿದ್ದಾರೆ. ರಾಮಲಿಂಗಾರೆಡ್ಡಿ ಅವಧಿಯಲ್ಲಿ ಸಾರಿಗೆ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿಯಾಗಿದೆ ಎಂದ ಹೆಬ್ಬಾರ್, ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Join Whatsapp