ಗೋವಾ ಸಿಎಂ ಪ್ರಮೋದ್ ಸಾವಂತ್ ಕ್ಷಮೆಯಾಚನೆಗೆ ಶಿವಸೇನೆ ಆಗ್ರಹ

Prasthutha|

ಅತ್ಯಾಚಾರ ನಡೆದಿರುವುದಕ್ಕೆ ಬಾಲಕಿಯ ಪೋಷಕರೇ ಜವಾಬ್ದಾರಿ ಎಂದಿದ್ದ ಮುಖ್ಯಮಂತ್ರಿ!

- Advertisement -

ಪಣಜಿ : ಇತ್ತೀಚೆಗೆ ನಡೆದ ಅಪ್ರಾಪ್ತ ವಯಸ್ಸಿನ ಬಾಲಕಿಯ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಪೋಷಕರೇ ಜವಾಬ್ದಾರಿ ಎಂದು ಹೇಳಿದ್ದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಕೂಡಲೇ ಕ್ಷಮೆಯಾಚಿಸಬೇಕು. ಇಲ್ಲವಾದಲ್ಲಿ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಶಿವಸೇನೆ ಎಚ್ಚರಿಕೆ ನೀಡಿದೆ.

ಅತ್ಯಾಚಾರ ಸಂತ್ರಸ್ತೆಯ ಪೋಷಕರೇ ಜವಾಬ್ದಾರಿ ಎಂದು ಹೇಳಿದ್ದ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರ ಹೇಳಿಕೆಯನ್ನು ಖಂಡಿಸಿ ಇಂದು ಶಿವಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

- Advertisement -

ಈ ಸಂದರ್ಭದಲ್ಲಿ ಮಾತನಾಡಿದ ಶಿವಸೇನೆಯ ಮುಖಂಡ ಜಿತೇಶ್ ಕಾಮತ್ , ಬಾಣಾವಲಿಯಲ್ಲಿ ಇಬ್ಬರು ಅಪ್ರಾಪ್ತ ವಯಸ್ಸಿನ ಬಾಲಕಿಯರ ಮೇಲೆ ಅತ್ಯಾಚಾರ ನಡೆದಿದೆ. ರಾಜ್ಯದಲ್ಲಿ ಕಾನೂನು ಮತ್ತು ಸುಸ್ಯವಸ್ಥೆ ಹದಗೆಟ್ಟಿದೆ. ಇದಕ್ಕೆ ಸರ್ಕಾರವೇ ಜವಾಬ್ದಾರಿಯಾಗಿದೆ. ಇಂತಹ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಇದಕ್ಕೆ ಪೋಷಕರೇ ಜವಾಬ್ದಾರಿ ಎಂದು ಹೇಳುತ್ತಿದ್ದಾರೆ. ಈ ರೀತಿ ಬೇಜವಾಬ್ದಾರಿ ಹೇಳಿಕೆ ನೀಡಿರುವ ಮುಖ್ಯಮಂತ್ರಿಗಳು ಕೂಡಲೆ ಕ್ಷಮೆಯಾಚಿಸಬೇಕು. ಇಲ್ಲವಾದಲ್ಲಿ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಶಿವಸೇನೆ ಎಚ್ಚರಿಕೆ ನೀಡಿದೆ.

ಗೋವಾ ರಾಜ್ಯ ಶಿವಸೇನೆಯ ಪ್ರಮುಖ ಸುಭಾಷ್ ಕೇರಕರ್, ಮಿಲಿಂದ ಗಾವಸ್ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Join Whatsapp