ಚರ್ಚುಗಳಲ್ಲಿ ವ್ಯಾಕ್ಸಿನ್ ತೆಗೆದುಕೊಳ್ಳದಂತೆ ಹೇಳಲಾಗುತ್ತಿದೆ : ಸಂಸದೆ ಶೋಭಾ ಕರಂದ್ಲಾಜೆಯಿಂದ ವಿವಾದಾತ್ಮಕ ಹೇಳಿಕೆ

Prasthutha|

ಚಿಕ್ಕಮಗಳೂರು : ಚರ್ಚುಗಳಲ್ಲಿ ವ್ಯಾಕ್ಸಿನ್ ತಗೊಳ್ಳಬಾರದೆಂದು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಚಿಕ್ಕಮಗಳೂರಿನಲ್ಲಿ ಹೇಳಿಕೆ ನೀಡಿರುವ ಸಂಸದೆ ಶೋಭಾ, ಮೂಡಿಗೆರೆ, ಆಲ್ದೂರಿನ ಕೆಲ ಚರ್ಚುಗಳಲ್ಲಿ ವ್ಯಾಕ್ಸಿನ್ ತೆಗೆದುಕೊಳ್ಳಬಾರದು ಎಂದು ಅಪಪ್ರಚಾರ ಮಾಡಲಾಗುತ್ತಿದೆ ಎಂದು ಹೇಳಿಕೆ ನೀಡಿದ್ದಾರೆ.

- Advertisement -

ಮತಾಂತರಗೊಂಡವರು ಚರ್ಚಿಗೆ ಹೋದಾಗ ಇಂತಹಾ ಅಪಪ್ರಚಾರ ಮಾಡಲಾಗುತ್ತಿದ್ದು, ಯಾರು, ಏಕೆ ಹೀಗೆ ಹೇಳುತ್ತಿದ್ದಾರೆ ಎಂಬುದನ್ನು ಪತ್ತೆ ಹಚ್ಚಬೇಕು. ಅವರು ವ್ಯಾಕ್ಸಿನ್ ತೆಗೆದುಕೊಂಡು ಬೇರೆಯವರು ತಗೊಳ್ಳಬಾರದೆಂದು ತಡೆಯುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಕ್ಯಾಥೋಲಿಕ್ ಚರ್ಚ್ ಎಂದು ನಾನು ಹೇಳುತ್ತಿಲ್ಲ. ಅದರಲ್ಲೇ ಬೇರೆ ಚರ್ಚ್ ಇರಬಹುದು. ಇತ್ತೀಚೆಗೆ ಬಂದ ಪ್ರಾಟೆಸ್ಟೆಂಟ್, ಸೆಂಥಕೋಸ್ಟ್ ನಂತಹಾ ಚರ್ಚ್‍ಗಳಿಂದ ಅಪಪ್ರಚಾರ ನಡೆಯುತ್ತಿದೆ. ಈ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಶೋಭಾ ಹೇಳಿದ್ದಾರೆ.

Join Whatsapp