Home ಟಾಪ್ ಸುದ್ದಿಗಳು ಚಿನ್ನ ದರೋಡೆ ವೇಳೆ ಶೂಟೌಟ್ ಪ್ರಕರಣ: ಮೂವರ ಬಂಧನ

ಚಿನ್ನ ದರೋಡೆ ವೇಳೆ ಶೂಟೌಟ್ ಪ್ರಕರಣ: ಮೂವರ ಬಂಧನ

ಮೈಸೂರು: ಚಿನ್ನದ ಅಂಗಡಿಯಲ್ಲಿ ನಡೆದಿದ್ದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮೈಸೂರಿನ ವಿದ್ಯಾರಣ್ಯಪುರಂನಲ್ಲಿ ನಾಲ್ಕು ದಿನಗಳ ಹಿಂದೆ ಚಿನ್ನದ ಅಂಗಡಿಯಲ್ಲಿ ದರೋಡೆ ನಡೆದಿತ್ತು. ಈ ವೇಳೆ ದುಷ್ಕರ್ಮಿಗಳು ಹಾರಿಸಿದ ಗುಂಡಿಗೆ ಚಂದ್ರು ಎಂಬ ಯುವಕ ಬಲಿಯಾಗಿದ್ದ. ಅಪರಾಧಿಗಳನ್ನು ಬಂಧಿಸಲು ಪೊಲೀಸರು ವಿಶೇಷ ತಂಡಗಳನ್ನು ರಚಿಸಿದ್ದರು.


ರಾಜಸ್ಥಾನ ಮೂಲದ ಇಬ್ಬರು ಹಾಗೂ ಓರ್ವ ಸ್ಥಳೀಯನನ್ನು ಮಹಾರಾಷ್ಟ್ರದ ಪುಣೆ ಏರ್ ಪೋರ್ಟ್ ನಲ್ಲಿ ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.


ವಿದ್ಯಾರಣ್ಯಪುರಂ ಪೊಲೀಸರು ಹಾಗೂ ಸಿಸಿಬಿ ಪೊಲೀಸರು ಡಿಸಿಪಿ ಗೀತಾ ಪ್ರಸನ್ನ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಿದೆ.


Join Whatsapp
Exit mobile version