ಸಿದ್ದಾಪುರ: ನದಿಯಲ್ಲಿ ಈಜಲು ತೆರಳಿದ ವಿದ್ಯಾರ್ಥಿ ಸಾವು

Prasthutha|

ಮಡಿಕೇರಿ: ನದಿಯಲ್ಲಿ ಈಜಲು ತೆರಳಿದ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ನೆಲ್ಯಹುದಿಕೇರಿ ಸಮೀಪದ ಬರಡಿ ಗ್ರಾಮದಲ್ಲಿ ನಡೆದಿದೆ.

- Advertisement -

ನೆಲ್ಯಹುದಿಕೇರಿ ಗ್ರಾ.ಪಂ ವ್ಯಾಪ್ತಿಯ ನಲ್ವತ್ತೇಕರೆ ನಿವಾಸಿ ಮಣಿ ಎಂಬವರ ಮಗ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿ ವಿಪಿನ್ ಮೃತ ಯುವಕ ಎಂದು ಗುರುತಿಸಲಾಗಿದೆ.

ಶನಿವಾರ ಸ್ನೇಹಿತರೊಂದಿಗೆ ಬರಡಿಯ ಕಾವೇರಿ ನದಿಗೆ ಈಜಲು ತೆರಳಿದ್ದಾನೆ. ಈ ಸಂದರ್ಭ ನದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಸ್ಥಳೀಯ ಮುಳುಗು ತಜ್ಞರು ಮೃತದೇಹವನ್ನು ನದಿಯಿಂದ ಹೊರತೆಗೆದಿದ್ದು, ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp
Exit mobile version