ಸಿದ್ದಾಪುರ| ಸೂಕ್ತ ಚರಂಡಿ ಇಲ್ಲದೆ ಜಲಾವೃತಗೊಂಡ ರಸ್ತೆ; ಸಾರ್ವಜನಿಕರ ಸಂಚಾರಕ್ಕೆ ಅಡ್ಡಿ

Prasthutha|

ಮಡಿಕೇರಿ: ಸಿದ್ದಾಪುರ ವ್ಯಾಪ್ತಿಗೆ ಒಳಪಡುವ ಇಂಜಳಗೆರೆಯಿಂದ ಒಂಟಿಯಂಗಡಿ ತೆರಳುವ  ಮಾರ್ಗದಲ್ಲಿರುವ ಸಿಸಿ ನ್ಯಾಯಬೆಲೆ ಅಂಗಡಿ ಮುಂಭಾಗದ ರಸ್ತೆಗೆ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಜಲವೃತವಾಗಿದ್ದು, ಪಾದಚಾರಿಗಳು, ದ್ವಿಚಕ್ರ ವಾಹನ ಸವಾರರು ಪರದಾಡುವ ಸ್ಥಿತಿ ಎದುರಾಗಿದೆ.

- Advertisement -

ಸಾರ್ವಜನಿಕರಿಗೆ ತೊಂದರೆ ಆಗಬಾರದೆಂಬ ಸದುದ್ದೇಶದಿಂದ ಈ ಹಿಂದೆ ಇದೇ ಸ್ಥಳದಲ್ಲಿ ಸರಕಾರದಿಂದ ಮೋರಿಯನ್ನು ಅಳವಡಿಸಿ ನೀರು ರಸ್ತೆಯಲ್ಲಿ ನಿಲ್ಲದಂತೆ ಕ್ರಮ ಕೈಗೊಳ್ಳಲಾಗಿತ್ತು. ಕಾಲಕ್ರಮೇಣ ಪಕ್ಕದ ಖಾಸಗಿ ತೋಟದ ಮಾಲೀಕರೊಬ್ಬರು ನೀರು ತಮ್ಮ ತೋಟಕ್ಕೆ ಹರಿದು ಬರುತ್ತಿದೆ ಎಂಬ ಕಾರಣಕ್ಕೆ ಇಲ್ಲಿದ್ದ ಮೋರಿಯನ್ನು ಮುಚ್ಚಿದ್ದಾರೆ. ಇದರಿಂದಾಗಿ ಇತ್ತೀಚಿನ ದಿನಗಳಲ್ಲಿ ಮಳೆ ನೀರು ರಸ್ತೆಯಲ್ಲೇ ನಿಂತ್ತಿದ್ದು, ಅನಾಹುತಗಳನ್ನು ತಂದೊಡ್ಡುವ ಸಾಧ್ಯತೆ ಹೆಚ್ಚಿದೆ.

ಕೆಸರುಮಯವಾಗಿರುವ ಈ ರಸ್ತೆಯಲ್ಲಿ ಹಲವರು ಬಿದ್ದಿರುವ ಉದಾಹರಣೆಗಳು ಕೂಡ ಇವೆ. ಇದನ್ನು ಪ್ರತ್ಯಕ್ಷವಾಗಿ ಕಂಡ ಸ್ಥಳೀಯ ನಿವಾಸಿ ರಾಜು ಚರಂಡಿ ನಿರ್ಮಿಸಿ ನೀರು ಹರಿಯಲು ವ್ಯವಸ್ಥೆ ಮಾಡಿದ್ದಾರೆ.

- Advertisement -

ಸಿದ್ದಾಪುರ ಗ್ರಾಮ ಪಂಚಾಯತಿ ಈ ಬಗ್ಗೆ ಗಮನ ಹರಿಸಿ ಮೋರಿ ದುರಸ್ತಿಗೆ ಕ್ರಮ ಕೈಗೊಳ್ಳುವುದರ ಮೂಲಕ ಈ ಸಮಸ್ಯೆಯನ್ನು ಶಾಶ್ವತವಾಗಿ ಬಗೆಹರಿಸಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Join Whatsapp