RSS ನಾಯಕರ ನಿಷ್ಠೆ ರಾಷ್ಟ್ರಧ್ವಜಕ್ಕೋ, ಭಗವಾ ಧ್ವಜಕ್ಕೋ ಎಂದು ಮತ್ತೆ ಸವಾಲು ಹಾಕಿದ ಸಿದ್ದರಾಮಯ್ಯ

Prasthutha|

ಬೆಂಗಳೂರು: ವಿರೋಧ ಪಕ್ಷದ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಇದೀಗ ಮತ್ತೊಮ್ಮೆ ಅರ್ ಎಸ್ ಎಸ್ ನಾಯಕರಿಗೆ ಸವಾಲು ಹಾಕಿದ್ದಾರೆ. RSS ಮೂಲವನ್ನು ಕೆದಕಿದ್ದ ಸಿದ್ದರಾಮಯ್ಯ ಇದೀಗ ಸರಣಿ ಟ್ವೀಟ್‌ಗಳ ಮೂಲಕ ಬಿಜೆಪಿಗರನ್ನು ಬಿಟ್ಟು ಆರೆಸ್ಸೆಸ್ ನಾಯಕರಿಗೆ ಹಲವು ಸವಾಲುಗಳನ್ನು ಹಾಕಿದ್ದಾರೆ, ಪ್ರಶ್ನೆಗಳನ್ನು ಕೇಳಿದ್ಧಾರೆ.

- Advertisement -

ನಿಮ್ಮ ನಿಷ್ಠೆ ರಾಷ್ಟ್ರಧ್ವಜಕ್ಕೋ, ಭಗವಾ ಧ್ವಜಕ್ಕೋ ಹೇಳಿ ಎಂದು ಆರೆಸ್ಸೆಸ್ ನಾಯಕರನ್ನು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.”ಆರ್.ಎಸ್.ಎಸ್ ನಾಯಕರೇ ನಿಮ್ಮ ಆತ್ಮವನ್ನು ಸಾಕ್ಷಿಯಾಗಿಟ್ಟುಕೊಂಡು ಹೇಳಿಬಿಡಿ.

ನಿಮ್ಮ ನಿಷ್ಠೆ ರಾಷ್ಟ್ರಧ್ವಜಕ್ಕೋ? ಭಗವಾ ಧ್ವಜಕ್ಕೋ? ನಿಮ್ಮ ನಿಷ್ಠೆ ಸಂವಿಧಾನಕ್ಕೋ ? ಮನುಸ್ಮೃತಿಗೋ? ನಿಮ್ಮ ನಿಷ್ಠೆ ಗಾಂಧೀಜಿಗೋ? ಗೋಡ್ಸೆಗೋ?” ಎಂದು ಇಂದು ಶನಿವಾರ ತಮ್ಮ ಒಂದು ಟ್ವೀಟ್‌ನಲ್ಲಿ ಅವರು ಬರೆದಿದ್ದಾರೆ. ಕುತೂಹಲವೆಂದರೆ ಸಿದ್ದರಾಮಯ್ಯ ತಮ್ಮ 12 ಟ್ವೀಟ್‌ಗಳಲ್ಲಿ #AryanRSS ಎಂಬ ಹ್ಯಾಷ್ ಟ್ಯಾಗ್ ಹಾಕಿದ್ದಾರೆ.

Join Whatsapp