ಸಿದ್ದರಾಮಯ್ಯ ಮತ್ತು ನಾನು ಒಂದೇ ಮನಸ್ಸಿನವರು : ರಾಹುಲ್ ಗಾಂಧಿ

Prasthutha|

ದಾವಣಗೆರೆ : ಒಬ್ಬ ವ್ಯಕ್ತಿಯಾಗಿ ಸಿದ್ದರಾಮಯ್ಯ ನನಗೆ ಇಷ್ಟ, ಸಿದ್ದರಾಮಯ್ಯ ಅವರ ವಿಚಾರಗಳಿಗೆ ನನ್ನ ಸಹಮತ ಇದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ.

- Advertisement -

ಸಿದ್ದರಾಮಯ್ಯ ಅವರ 75ನೇ ಹುಟ್ಟುಹಬ್ಬದ ಪ್ರಯುಕ್ತ ನಡೆದ ಸಿದ್ದರಾಮಯ್ಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ರಾಹುಲ್ ಗಾಂಧಿ, ಸಾಮಾನ್ಯವಾಗಿ ನಾನು ಹುಟ್ಟುಹಬ್ಬದ ಕಾರ್ಯಕ್ರಮಗಳಿಗೆ ಹೋಗಲ್ಲ, ಆದರೆ  ಸಿದ್ದರಾಮಯ್ಯ ಜೊತೆ ವಿಶೇಷ ಸಂಬಂಧ ಇರುವ ಕಾರಣಕ್ಕೆ ಈ ಕಾರ್ಯಕ್ರಮಕ್ಕೆ ಬಂದಿದ್ದೇನೆ ಎಂದು ತಿಳಿಸಿದರು.

ಬಡವರು, ಶೋಷಿತರ ಸಮುದಾಯಗಳ ಬಗ್ಗೆ ಸಿದ್ದರಾಮಯ್ಯನವರ ಧೋರಣೆ ಮತ್ತು ಬದ್ಧತೆ ಬಗ್ಗೆ ನನಗೆ ಸಹಮತ ಇದೆ, ನಾವು ಒಂದೇ ಮನಸ್ಸಿನವರು ಅಂತ ಹೇಳಿದರು. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಕೊಟ್ಟಿದ್ದ ಅನ್ನಭಾಗ್ಯ, ಆರೋಗ್ಯ ಭಾಗ್ಯ, ಕ್ಷೀರ ಭಾಗ್ಯ, ಪಶು ಭಾಗ್ಯ, ಇಂದಿರಾ ಕ್ಯಾಂಟೀನ್, ಸಾಲಮನ್ನಾ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಕರ್ನಾಟಕದ ಜನರು ಇಂದಿಗೂ ನೆನಪಿಸಿಕೊಳ್ಳುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದರು.

- Advertisement -

ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಸರ್ಕಾರ ನಡೆಸಿದ ರೀತಿಗೆ ನನಗೆ ಹೆಮ್ಮೆ ಮತ್ತು ಸಂತಸ ಇದೆ, ಕರ್ನಾಟಕದ ಎಲ್ಲಾ ಸಮಸ್ಯೆಗಳ ಬಗ್ಗೆ ಸಿದ್ದರಾಮಯ್ಯನವರಿಗೆ ದೂರದೃಷ್ಟಿ ಇತ್ತು ಎಂದು ಸಿದ್ದರಾಮಯ್ಯ ಅವರನ್ನು ರಾಹುಲ್ ಗಾಂಧಿ ಗುಣಗಾನ ಮಾಡಿದರು.

ಸಿದ್ದಾರಾಮಯ್ಯನವರು ವಯಸ್ಸಾದಂತೆ ಯುವಕರಂತೆ ಕಾಣುತ್ತಿದ್ದಾರೆ ಎಂದು ಚಟಾಕಿ ಹಾರಿಸಿ ಸಿದ್ದರಾಮಯ್ಯನವರಿಗೆ ಹುಟ್ಟುಹಬ್ಬದ ಶುಭಾಷಯ ಕೋರಿದರು

ಇದೇ ವೇಳೆ ರಾಜ್ಯ ಹಾಗೂ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು.



Join Whatsapp