ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ಇಳಿಸಲು ಸಾಧ್ಯವಿಲ್ಲ: ಕೆ.ಹೆಚ್.ಮುನಿಯಪ್ಪ

Prasthutha|

ಬೆಂಗಳೂರು: 136 ಶಾಸಕರ ಬೆಂಬಲ ಇರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಳಿಸಬೇಕು ಎಂಬ ಪ್ರಯತ್ನ ನಡೆಯುತ್ತಿದೆ. ಆದರೆ ಅದ ಸಾಧ್ಯವಿಲ್ಲ ಎಂದು ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದ್ದಾರೆ‌.

- Advertisement -

ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜಕೀಯವಾಗಿ ಒಂದು ಕ್ಷುಲ್ಲಕ ಕಾರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ತೆಗಿಬೇಕು ಅಂತಾ ಪಾದಯಾತ್ರೆ ಮಾಡ್ತಿದ್ದಾರೆ. ಪಾದಯಾತ್ರೆ ದೇಶದಲ್ಲಿ ಅಭಿವೃದ್ಧಿ ಕೆಲಸಕ್ಕೆ ಮಾಡಲಿ. ಕೇಂದ್ರದಲ್ಲಿ ಇವರನ್ನ ಸಚಿವರನ್ನಾಗಿ ಮಾಡಿದ್ದಾರೆ. ನಮ್ಮ ಕಡೆಯಿಂದ ನಾಲ್ಕು ಜನ ಸಚಿವರಿದ್ದಾರೆ. ರಾಜ್ಯದ ಅಭಿವೃದ್ಧಿ ಕಡೆ ಇವರು ಚಿಂತನೆ ಮಾಡ್ಬೇಕು ಎಂದು ರಾಜ್ಯದ ಕೇಂದ್ರ ಸಚಿವರಿಗೆ ಟಾಂಗ್‌ ಕೊಟ್ಟರು.



Join Whatsapp
Exit mobile version