ಡಿಕೆಶಿ ವಿರುದ್ಧ ಸೋನಿಯಾಗೆ ದೂರು ನೀಡಿದ್ದರೇ ಸಿದ್ದರಾಮಯ್ಯ? ನಕಲಿ ಪತ್ರದ ಬಗ್ಗೆ ಸಿದ್ದು ಹೇಳಿದ್ದೇನು?

Prasthutha|

ಬೆಂಗಳೂರು: ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಡಿಕೆಶಿ ವಿರುದ್ಧ ದೂರು ನೀಡಿ ಬರೆಯಲಾದ ಪತ್ರದ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

- Advertisement -

ಈ ಕುರಿತು ಟ್ವೀಟ್ ಮಾಡಿದ ಅವರು, ನನ್ನ ಹೆಸರನ್ನು ದುರ್ಬಳಕೆ ಮಾಡಿಕೊಂಡ ನಕಲಿ ಪತ್ರವೊಂದು ಹರಿದಾಡುತ್ತಿದೆ. ನನ್ನ ಮತ್ತು ಕೆಪಿಸಿಸಿ ಅಧ್ಯಕ್ಷರ ಸಂಬಂಧವನ್ನು ಕೆಡಿಸುವ ದುರುದ್ದೇಶದಿಂದಲೇ ಯಾರೋ ಕಿಡಿಗೇಡಿಗಳು ಈ ಕೃತ್ಯ ನಡೆಸಿದ್ದಾರೆ. ಈ ಪತ್ರಕ್ಕೂ ನನಗೂ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸುತ್ತಿದ್ದೇನೆ ಎಂದಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಗೆಲುವಿನ ಹಾದಿಯಲ್ಲಿರುವ ನಮ್ಮ‌ ಪಕ್ಷದ ಬಗ್ಗೆ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸುವ ಉದ್ದೇಶದಿಂದಲೇ ಈ ಖೊಟ್ಟಿ ಪತ್ರವನ್ನು ಹರಿಯಬಿಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

- Advertisement -

ಈ ಬಗ್ಗೆ ನಾನು ಪೋಲಿಸರಿಗೆ ದೂರು ನೀಡಲಿದ್ದು, ಈ ದುಷ್ಕೃತ್ಯದ ಹಿಂದಿನ ದುರುಳರನ್ನು ಪತ್ತೆ ಹಚ್ಚಿ ಶಿಕ್ಷೆಗೊಳಪಡಿಸುತ್ತಾರೆಂದು ನಂಬಿದ್ದೇನೆ ಎಂದು ಸಿದ್ದರಾಮಯ್ಯ ಟ್ವೀಟ್ ನಲ್ಲಿ ಉಲ್ಲೇಖ ಮಾಡಿದ್ದಾರೆ.

Join Whatsapp