ಸಿದ್ದರಾಮಯ್ಯ ಸ್ಪರ್ಧೆ ಹಿನ್ನೆಲೆ: ಕೋಲಾರ ಜಿಲ್ಲಾ ಉಸ್ತುವಾರಿ ಉಪಾಧ್ಯಕ್ಷರಾಗಿ ಎಂ.ಆರ್. ಸೀತಾರಾಮ್ ನೇಮಕ

Prasthutha|

ಬೆಂಗಳೂರು: ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೋಲಾರದಿಂದ ಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಿಸುತ್ತಿದ್ದಂತೆ ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಎಂ.ಆರ್. ಸೀತಾರಾಮ್ ಅವರನ್ನು ಕೋಲಾರ ಜಿಲ್ಲಾ ಕಾಂಗ್ರೆಸ್ ಸಮಿತಿ ಉಸ್ತುವಾರಿ ಉಪಾಧ್ಯಕ್ಷರನ್ನಾಗಿ ನಿಯೋಜಿಸಲಾಗಿದೆ.

- Advertisement -

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಈ ಕುರಿತು ಆದೇಶ ಹೊರಡಿಸಿದ್ದಾರೆ.

ಎಂ.ಆರ್. ಸೀತಾರಾಮ್ ಅವರನ್ನು ಈ ಮುನ್ನ ಕೋಲಾರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕೆ.ಪಿ.ಸಿ.ಸಿ. ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. ಕೋಲಾರ ಡಿಸಿಸಿ ಅಧ್ಯಕ್ಷ ಸ್ಥಾನ ಖಾಲಿ ಇದ್ದ ಕಾರಣದಿಂದ ಕೆಪಿಸಿಸಿ ಉಪಾಧ್ಯಕ್ಷರಾದ ಎಂ. ನಾರಾಯಣ ಸ್ವಾಮಿ ಅವರನ್ನು ಹೆಚ್ಚುವರಿಯಾಗಿ ಕೋಲಾರ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ಉಸ್ತುವಾರಿಯಾಗಿ ನಿಯೋಜಿಸಲಾಗಿತ್ತು.

- Advertisement -

ಆದರೆ ಇದೀಗ ಈ ಹಿಂದೆ ನೇಮಿಸಿದಂತೆ ಕೋಲಾರ ಜಿಲ್ಲಾ ಕಾಂಗ್ರೆಸ್ ಸಮಿತಿ  ಉಸ್ತುವಾರಿ ಉಪಾಧ್ಯಕ್ಷರಾಗಿ ಮುಂದುವರೆದು, ಕಾರ್ಯನಿರ್ವಹಿಸಲಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಎಂ. ನಾರಾಯಣ ಸ್ವಾಮಿ ಅವರು ಎಂದಿನಂತೆ ಕೆಪಿಸಿಸಿ ಕಾರ್ಯಕ್ರಮ, ಸಭೆಗಳು ಹಾಗೂ ಕಂಟ್ರೋಲ್ ರೂಂ ಉಸ್ತುವಾರಿ ಮುಂದುವರೆಯಲಿದ್ದಾರೆ.

Join Whatsapp