ಬಾದಾಮಿಯಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರಲು ಸಿದ್ದರಾಮಯ್ಯ ನಿರ್ಧಾರ!

Prasthutha|

ಕೋಲಾರ: 2023 ರ ವಿಧಾನಸಭಾ ಚುನಾವಣೆಯಲ್ಲಿ ಬಾದಾಮಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಅಧಿಕೃತವಾಗಿ ಘೋಷಿಸಿದ್ದಾರೆ. ಕರ್ನಾಟಕದ ಕೋಲಾರದ ಚೌಡೇನಹಳ್ಳಿಯಲ್ಲಿರುವ ಬ್ಯಾಟರಾಯನಪುರ ಶಾಸಕ ಕೃಷ್ಣ ಬೈರೇಗೌಡ ಅವರ ತೋಟದ ಮನೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ ನಡೆಸುತ್ತಿದ್ದಾಗ ಸಿದ್ದರಾಮಯ್ಯ ಈ ಘೋಷಣೆ ಮಾಡಿದರು.

- Advertisement -

2023 ರ ವಿಧಾನಸಭಾ ಚುನಾವಣೆಯಲ್ಲಿ ಬಾದಾಮಿಯಲ್ಲಿ ಸ್ಪರ್ಧಿಸುವ ಸಾಧ್ಯತೆಯನ್ನು ತಳ್ಳಿಹಾಕಲಾಗಿದೆ. ವರುಣಾ , ಕೋಲಾರ, ಅಥವಾ ಹೈಕಮಾಂಡ್ ಸೂಚಿಸಿದ ಕಡೆಯಿಂದ ನಾನು ಸ್ಪರ್ಧಿಸುತ್ತೇನೆ ಎಂದು ಹೇಳಿದ ಸಿದ್ದರಾಮಯ್ಯ, ನಾಮಪತ್ರವನ್ನು ಕಾಂಗ್ರೆಸ್ ಹೈಕಮಾಂಡ್ ಅವರೇ ನೀಡಬೇಕು ಎಂದು ಹೇಳಿದರು.

ನನ್ನ ಹಿಂದಿನ ಕ್ಷೇತ್ರದ ಜನರು ಬಾದಾಮಿಯಿಂದ ಸ್ಪರ್ಧಿಸುವಂತೆ ನನ್ನನ್ನು ಕೇಳಿದ್ದಾರೆ, ಆದರೆ ಸಮಸ್ಯೆಯೆಂದರೆ ನನ್ನ ಬಿಡುವಿಲ್ಲದ ವೇಳಾಪಟ್ಟಿಯಿಂದಾಗಿ ನಾನು ಪ್ರಯಾಣಿಸಲು ಮತ್ತು ಜನರ ಸಮಸ್ಯೆಗಳಿಗೆ ಸ್ಪಂದಿಸಲು ಸಾಧ್ಯವಾಗುವುದಿಲ್ಲ. ಶಾಸಕನ ಅರ್ಥವನ್ನು “ಜನಪ್ರತಿನಿಧಿ” ಎಂದು ಉಲ್ಲೇಖಿಸಿದ ಅವರು, ಜನರ ಕಷ್ಟಗಳು ಮತ್ತು ಅಗತ್ಯಗಳಿಗೆ ಸ್ಪಂದಿಸುವುದು ಶಾಸಕರ ಜವಾಬ್ದಾರಿಯಾಗಿದೆ ಎಂದು ಹೇಳಿದರು. ಅದು ದೂರದಲ್ಲಿದ್ದರೆ ಹೋಗಲು ಸಾಧ್ಯವಾಗುವುದಿಲ್ಲ ಹಾಗಾಗಿ ಈ ನಿರ್ಧಾರ ಕೈಗೊಂಡ್ಡಿದ್ದೇನೆ ಎಂದು ಹೇಳಿದರು.

Join Whatsapp