ಸಚಿವ ಸಂಪುಟದಿಂದ ಅಶ್ವತ್ಥ್ ನಾರಾಯಣ್ ಕಿತ್ತುಹಾಕುವಂತೆ ಸಿದ್ದರಾಮಯ್ಯ ಒತ್ತಾಯ

Prasthutha|

ಬೆಂಗಳೂರು: ಹತ್ಯೆ ಮಾಡಲು ಕರೆ ನೀಡುವ ಸಚಿವರಿಗೆ ಸಂಪುಟದಲ್ಲಿ ಮುಂದುವರಿಯುವ ಯಾವ ನೈತಿಕತೆಯೂ ಇಲ್ಲ. ರಾಜ್ಯಪಾಲರು ತಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಅವರನ್ನು ಸಂಪುಟದಿಂದ ಕಿತ್ತುಹಾಕಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

- Advertisement -


ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ‘ಜನತೆಯ ಮಾನ-ಪ್ರಾಣ ರಕ್ಷಣೆಯ ಹೊಣೆ ಸರ್ಕಾರದ್ದಾಗಿದೆ. ಇಂತಹ ಸಚಿವರು ತಾವೇ ಖುದ್ದಾಗಿ ಹತ್ಯೆಗೆ ಪ್ರಚೋದಿಸಿದರೆ? ಅಶ್ವತ್ಥ್ ನಾರಾಯಣ್ ಅವರಿಗೆ ಸಚಿವ ಸ್ಥಾನದಲ್ಲಿ ಮುಂದುವರೆಯುವ ಯಾವ ನೈತಿಕತೆ ಇರುತ್ತದೆ? ಇದು ಪ್ರಧಾನಿ ಮೋದಿ ಮತ್ತು ಗೃಹಸಚಿವ ಅಮಿತ್ ಶಾ ಗಮನಕ್ಕೆ ಬಂದಿಲ್ಲವೇ?’ ಎಂದು ಪ್ರಶ್ನಿಸಿದ್ದಾರೆ.
ಕೊಲೆಗಡುಕ ಮನಸ್ಥಿತಿಯ ಅಶ್ವತ್ಥ್ ನಾರಾಯಣ್ ಅಂತಹವರು ಸಾರ್ವಜನಿಕ ಜೀವನದಲ್ಲಿ ಇರಲಿಕ್ಕೆ ನಾಲಾಯಕ್. ಇಂತಹವರು ಉನ್ನತ ಶಿಕ್ಷಣ ಸಚಿವರಾದರೇ? ಬಿಜೆಪಿ ಸಮಾಜಕ್ಕೆ ಯಾವ ಸಂದೇಶ ಕೊಡಲಿಕ್ಕೆ ಹೊರಟಿದೆ? ಬಿಜೆಪಿಯ ಹೊಡಿ-ಬಡಿ ಸಂಸ್ಕೃತಿಯೇ ಅವರ ಬೌದ್ಧಿಕ ದಿವಾಳಿತನದ ಪ್ರತೀಕ. ಸೈದ್ಧಾಂತಿಕವಾಗಿ ನನ್ನನ್ನು ಎದುರಿಸುವ, ಇಲ್ಲವೇ ಸಾಧನೆಯ ಆಧಾರದಲ್ಲಿ ಮತ ಕೇಳುವ ಧಮ್-ತಾಕತ್ ಅವರಿಗೆ ಇಲ್ಲ. ಬಿಜೆಪಿಯವರದು ಶೂನ್ಯ ಸಾಧನೆ ಮತ್ತು ಪೊಳ್ಳು ಸಿದ್ಧಾಂತವೆಂದು ಹೇಳಿದರು.


ಸೈದ್ಧಾಂತಿಕವಾಗಿ ಎದುರಿಸಲಾಗದ ಕಾರಣಕ್ಕಾಗಿಯೇ ಮಹಾತ್ಮ ಗಾಂಧೀಜಿಯವರನ್ನು ಗೋಡ್ಸೆ ಕೊಂದ. ಅದೇ ಗೋಡ್ಸೆ ಸಂತಾನವೇ ವಿದ್ವಾಂಸರಾಗಿದ್ದ ಎಂ.ಎಂ.ಕಲಬರ್ಗಿ ಮತ್ತು ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಿರುವುದು. ಸಾವಿನ ಭಯ ನನಗಿಲ್ಲ. ಇಂತಹ ಕೊಲೆಗಡುಕ ಮನಸ್ಥಿತಿಯವರು ಅಧಿಕಾರದಲ್ಲಿದ್ದರೆ ರಾಜ್ಯದ ಯಾವುದೇ ವ್ಯಕ್ತಿ ಸುರಕ್ಷಿತನಲ್ಲ. ಸೋಲಿನ ಭಯದಿಂದ ತತ್ತರಿಸಿ ಹೋಗಿರುವ ಈ ಕೊಲೆಗಡುಕ ಮನಸ್ಸುಗಳು ಗೆಲುವಿಗಾಗಿ ಯಾರ ಹತ್ಯೆಯನ್ನೂ ಮಾಡಬಹುದು. ಈ ಬಗ್ಗೆ ಜನ ಎಚ್ಚರಗೊಳ್ಳಬೇಕು’ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

- Advertisement -

Join Whatsapp