Home ಟಾಪ್ ಸುದ್ದಿಗಳು ಸಿದ್ದರಾಮಯ್ಯ, ಡಿಕೆಶಿ ಅವರು ನಾನೊಂದು ತೀರ, ನೀನೊಂದು ತೀರವಾಗಿದ್ದಾರೆ: ಮುಖ್ಯಮಂತ್ರಿ ಬೊಮ್ಮಾಯಿ

ಸಿದ್ದರಾಮಯ್ಯ, ಡಿಕೆಶಿ ಅವರು ನಾನೊಂದು ತೀರ, ನೀನೊಂದು ತೀರವಾಗಿದ್ದಾರೆ: ಮುಖ್ಯಮಂತ್ರಿ ಬೊಮ್ಮಾಯಿ

ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ನಾನೊಂದು ತೀರ, ನೀನೊಂದು ತೀರ ವಾಗಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕುಟುಕಿದ್ದಾರೆ.

ಮೈಸೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ ‘ಮೊದಲು ಅವರ ತಟ್ಟೆಯಲ್ಲಿ ಏನಿದೆ ಎಂದು  ನೋಡಿಕೊಳ್ಳಲಿ. ಆಮೇಲೆ ಮತ್ತೊಬ್ಬರ ತಟ್ಟೆಯಲ್ಲಿ ಇರುವುದನ್ನು ಗಮನಿಸಲಿ’ ಎಂದರು. 

ಡಿ.ಕೆ.ಶಿವಕುಮಾರ್ ಅವರಿಗೆ ತಾವು ಮುಖ್ಯಮಂತ್ರಿಯಾಗಬೇಕೆಂಬದು ಬಹಳ ವರ್ಷಗಳ ಕನಸು. ಕೆಪಿಸಿಸಿ ಅಧ್ಯಕ್ಷರಾಗಿಯೇ ಸರಿಯಾಗಿ ಕೆಲಸ ಮಾಡಲು ಕಾಂಗ್ರೆಸ್ ಬಿಡುತ್ತಿಲ್ಲ. ಏನು ನಡೆಯುತ್ತಿದೆ ಎಂದು ನಾವು ಪ್ರತಿದಿನ ನೋಡುತ್ತಿದ್ದೇವೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Join Whatsapp
Exit mobile version