Home ಟಾಪ್ ಸುದ್ದಿಗಳು ವಯನಾಡ್ ದುರಂತ: ರಕ್ಷಣೆ, ಪರಿಹಾರ ಕಾರ್ಯಾಚರಣೆಗೆ ಇಬ್ಬರು ಐಎಎಸ್‌ ಅಧಿಕಾರಿಗಳನ್ನು ನಿಯೋಜಿಸಿದ ಸಿದ್ದರಾಮಯ್ಯ

ವಯನಾಡ್ ದುರಂತ: ರಕ್ಷಣೆ, ಪರಿಹಾರ ಕಾರ್ಯಾಚರಣೆಗೆ ಇಬ್ಬರು ಐಎಎಸ್‌ ಅಧಿಕಾರಿಗಳನ್ನು ನಿಯೋಜಿಸಿದ ಸಿದ್ದರಾಮಯ್ಯ

ಬೆಂಗಳೂರು: ಭೂ ಕುಸಿತದಿಂದ ತತ್ತರಿಸಿರುವ ವಯನಾಡಿನಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗೆ ಎಲ್ಲ ರೀತಿಯ ಸಹಕಾರ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದು, ಇದಕ್ಕಾಗಿ ಇಬ್ಬರು IAS ಅಧಿಕಾರಿಗಳನ್ನು ನಿಯೋಜಿಸಿದ್ದಾರೆ.

ನವದೆಹಲಿಯಲ್ಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಅವರು ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ್ದು, ವಯನಾಡಿನಲ್ಲಿ ರಕ್ಷಣೆ ಹಾಗೂ ಪರಿಹಾರ ಕಾರ್ಯಾಚರಣೆಗೆ ನೆರವಾಗಲು ಬೆಂಗಳೂರಿನಲ್ಲಿರುವ ಎನ್ ಡಿ ಆರ್ ಎಫ್ ತಂಡ ಹಾಗೂ ಮದ್ರಾಸ್ ಎಂಜಿನಿಯರ್ ಗ್ರೂಪ್ ಸೇನಾ ಪಡೆಯ ತಂಡಗಳು ತ್ವರಿತವಾಗಿ ತೆರಳಲು ಹಾಗೂ ಅಗತ್ಯ ಉಪಕರಣಗಳು ಮತ್ತು ಇತರ ಅಗತ್ಯ ಪರಿಹಾರ ಸಾಮಗ್ರಿಗಳನ್ನು ರವಾನೆ ಮಾಡಲು ನೆರವು ನೀಡಲಾಗಿದೆ.

ಎಂಇಜಿ ಯ ಒಬ್ಬರು ಅಧಿಕಾರಿ, ಇಬ್ಬರು ಜೆ.ಸಿ.ಓ. ಗಳು ಹಾಗೂ 70 ಮಂದಿ ವಿವಿಧ ರ್ಯಾಂಕಿನ ಸಿಬ್ಬಂದಿ ಈಗಾಗಲೇ ರಕ್ಷಣೆ ಹಾಗೂ ಪರಿಹಾರ ಸಾಮಗ್ರಿಗಳೊಂದಿಗೆ 15 ವಾಹನಗಳಲ್ಲಿ ವಯನಾಡಿಗೆ ತೆರಳಿದ್ದಾರೆ. ಇನ್ನೂ ಇಬ್ಬರು ಅಧಿಕಾರಿಗಳು, ನಾಲ್ಕು ಮಂದಿ ಜೆ.ಸಿ.ಓ.ಗಳು, ಹಾಗೂ 100 ಮಂದಿ ಸೇನಾ ಸಿಬ್ಬಂದಿ ರಕ್ಷಣಾ ಉಪಕರಣಗಳೊಂದಿಗೆ 40 ವಾಹನಗಳಲ್ಲಿ ತೆರಳಲಿದ್ದಾರೆ ಎಂದು ತಿಳಿಸಿದ್ದಾರೆ.

ಈ ತಂಡಗಳು ವಯನಾಡಿಗೆ ಶೀಘ್ರವೇ ತಲುಪಲು ಅನುವಾಗುವಂತೆ, ಬಂಡಿಪುರ ಚೆಕ್ ಪೋಸ್ಟ್ ನಲ್ಲಿ ಈ ಎನ್ ಡಿ ಆರ್ ಎಫ್ ಹಾಗೂ ಸೇನೆಯ ತಂಡಗಳಿಗೆ ಹಾಗೂ ಪರಿಹಾರ ಸಾಮಗ್ರಿಗಳ ಸಾಗಾನಣಿಕೆ ವಾಹನಗಳಿಗೆ ಗ್ರೀನ್‌ ಕಾರಿಡಾರ್‌ ಮೂಲಕ ಅನಿರ್ಬಂಧಿತ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ಸೂಚನೆ ನೀಡಲಾಗಿದೆ.

Join Whatsapp
Exit mobile version