ಅಚ್ಚೆ ದಿನ್ ಎಂದರೆ ಮುಂದೆ ಕೆಟ್ಟ ದಿನಗಳು ಕಾದಿವೆ ಎಂದರ್ಥ: ಸಿದ್ದರಾಮಯ್ಯ

Prasthutha|

ಬೆಂಗಳೂರು: ಅಚ್ಚೆ ದಿನ್ ಎಂದರೆ ಮುಂದೆ ಕೆಟ್ಟ ದಿನಗಳು ಕಾದಿವೆ ಎಂದರ್ಥ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ.

- Advertisement -

ಜನ ಸಾಮಾನ್ಯರ ಹಿತವನ್ನು ಸಂಪೂರ್ಣವಾಗಿ ಕಡೆಗಣಿಸಿ ಕೇಂದ್ರ ಸರ್ಕಾರ ಪ್ರತಿನಿತ್ಯ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡುತ್ತಿದ್ದು, ಪೆಟ್ರೋಲ್ ದರ 100 ಗಡಿ ದಾಟಿ ನಾಗಾಲೋಟದಲ್ಲಿ ಮುನ್ನುಗ್ಗುತ್ತಿರುವುದನ್ನು ಖಂಡಿಸಿ  ಮೈಸೂರಿನಲ್ಲಿ ಬೃಹತ್ ಸೈಕಲ್ ಜಾಥಾದಲ್ಲಿ ಅವರು ಮಾತನಾಡುತ್ತಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರು ಅಚ್ಛೇ ದಿನ್ ಬರುತ್ತದೆ ಎಂದಿದ್ದರು. ಅವರ ಮಾತು ಇದೀಗ ಸತ್ಯವಾಗಿದೆ. ಅವರ ಹೇಳಿಕೆಯನ್ನು ಕೆಟ್ಟ ದಿನಗಳು ಮುಂದೆ ಕಾದಿವೆ ಎಂದು ಅರ್ಥ ಮಾಡಿಕೊಳ್ಳಬೇಕು. ಕಳೆದ ಏಳು ವರ್ಷದಲ್ಲಿ ಕೇಂದ್ರ ಸರ್ಕಾರ ರಾಜ್ಯದಿಂದ ಪೆಟ್ರೋಲ್, ಡೀಸೆಲ್ ಮಾರಾಟದ ಮೇಲೆ ವಸೂಲಿ‌ ಮಾಡಿರುವ ತೆರಿಗೆ ಒಂದು ಲಕ್ಷ ಇಪ್ಪತ್ತು  ಸಾವಿರ ಕೋಟಿ. ಕೇಂದ್ರ ಸರ್ಕಾರ ಕೂಡಲೇ ತೆರಿಗೆ ಕಡಿಮೆ ಮಾಡಿ ಪೆಟ್ರೋಲ್, ಡೀಸೆಲ್ ದರ ಕಡಿಮೆ ಮಾಡಬೇಕು. ಬಿಜೆಪಿ ಎಂದರೆ ತಿಗಣೆ ಇದ್ದಂತೆ. ಜನರ ರಕ್ತ ಹೀರುವುದು ಅವರ ಕೆಲಸ. ಆದರೆ ಕಾಂಗ್ರೆಸ್ ಜನರ ಕಣ್ಣೀರು ಒರೆಸುವ ಕೆಲಸ ಮಾಡುತ್ತದೆ ಎಂದು ಹೇಳಿದರು.

- Advertisement -

ಕೆಪಿಸಿಸಿಯ ಮೈಸೂರು ನಗರ ಹಾಗೂ ಗ್ರಾಮಾಂತರ ಸಮಿತಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಕ್ಷ ಸೇರ್ಪಡೆ, ಸಹಾಯ ಹಸ್ತ ಕಾರ್ಯಕ್ರಮ, ಯುವ ಕಾಂಗ್ರೆಸ್ ಮತ್ತು ಜಿಲ್ಲಾ ಕಾಂಗ್ರೆಸ್ ಆಯೋಜಿಸಿದ್ದ ಸೈಕಲ್ ಜಾಥಗೆ ಸಿದ್ದರಾಮಯ್ಯ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ದ್ರುವನಾರಾಯಣ್, ಮಾಜಿ ಸಚಿವರಾದ ಎಸ್.ಸಿ. ಮಹದೇವಪ್ಪ, ರಮಾನಾಥ ರೈ, ಶಾಸಕ ಮಂಜುನಾಥ್, ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಪುಷ್ಪ ಅಮರನಾಥ್, ಮೈಸೂರು ನಗರ ಘಟಕದ ಅಧ್ಯಕ್ಷ ಮೂರ್ತಿ, ಗ್ರಾಮಾಂತರ ಜಿಲ್ಲಾಧ್ಯಕ್ಷ ಡಾ. ವಿಜಯಕುಮಾರ್, ಮಾಜಿ ಶಾಸಕರಾದ ವಾಸು, ವೆಂಕಟೇಶ್, ಸೋಮಶೇಖರ್ ಮತ್ತಿತರರು ಪಾಲ್ಗೊಂಡಿದ್ದರು.





ಪದೇ ಪದೇ ದ್ರೋಹ ಮಾಡುವವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬಾರದು‌. ಅಧಿಕಾರಕ್ಕಾಗಿ ಯಾರೂ ಪಕ್ಷಕ್ಕೆ ಬರಬಾರದು. ಜನಸೇವೆಯ ಗುರಿ ಇದ್ದವರನ್ನು ಮಾತ್ರ ಪಕ್ಷಕ್ಕೆ ಸೇರಿಸಿಕೊಳ್ಳಬೇಕು ಎಂದು ಸಿದ್ದರಾಮಯ್ಯ ಹೇಳಿದರು.

ರಾಜ್ಯದಲ್ಲಿ ಅತ್ಯಂತ ಕೆಟ್ಟ ಸರ್ಕಾರ ಇದೆ. ಮುಖ್ಯಮಂತ್ರಿ ಮತ್ತು ಅವರ ಮಗ ಜೆಸಿಬಿಯಲ್ಲಿ ಹಣ ದೋಚುತ್ತಿದ್ದಾರೆ. ಯಡಿಯೂರಪ್ಪ ಅವರು ಈಗಾಗಲೇ ಒಂದೂವರೆ ಲಕ್ಷ ಕೋಟಿ ಸಾಲ ಮಾಡಿದ್ದು, ಈ ಸರ್ಕಾರ ಸಾಲದ ಸರ್ಕಾರವಾಗಿದೆ. ಜನರಿಗೆ ಒಳ್ಳೆಯದಾಗಬೇಕಾದರೆ ಬಿಜೆಪಿ ಆಡಳಿತ ತೊಲಗಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕು ಎಂದರು.

ಕಾಂಗ್ರೆಸ್ ಎಂದರೆ ಒಂದು ಚಳವಳಿ, ಬಡವರ ಪಕ್ಷ. ನಾವು ನೊಂದವರ ಪರ. ಅನ್ಯಾಯಕ್ಕೆ, ದೌರ್ಜನ್ಯಕ್ಕೆ ಒಳಗಾದವರಿಗೆ ನ್ಯಾಯ ದೊರಕಿಸಿಕೊಡುವುದು ನಮ್ಮ ಕರ್ತವ್ಯ. ಆದರೆ ಯಡಿಯೂರಪ್ಪ ಹಿಂಬಾಗಿಲಿನಿಂದ ಬಂದು ಸಿಎಂ ಆಗಿದ್ದಾರೆ. 17 ಶಾಸಕರನ್ನು ಖರೀದಿಸಿ ಸರ್ಜಾರ ರಚನೆ ಮಾಡಿ ಆಡಳಿತ ನಡೆಸುತ್ತಿದ್ದಾರೆ ಎಂದು ಆಪಾದಿಸಿದರು.

ಕೊರೋನಾ ಮೂರನೇ ಅಲೆ ಸೆಪ್ಟೆಂಬರ್, ಅಕ್ಟೋಬರ್ ನಲ್ಲಿ ಬರುವ ಮಾಹಿತಿ ಇದೆ. ಒಂದು, ಎರಡನೇ ಅಲೆಯಲ್ಲಿ ನಮಗೇನೂ ಆಗಿಲ್ಲ ಎಂದು ಜನ ಮೂರನೇ ಅಲೆಯನ್ನು ನಿರ್ಲಕ್ಷ್ಯ ಮಾಡಬಾರದು. ಇದು ದೊಡ್ಡ ಸಾಂಕ್ರಾಮಿಕ ರೋಗ. ಅದರಿಂದ ದೂರ ಇರಲು ಎಲ್ಲರೂ ಲಸಿಕೆ ಹಾಕಿಸಿಕೊಳ್ಳಬೇಕು. ಎರಡನೇ ಅಲೆಯಲ್ಲಿ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ. ಸರ್ಕಾರ ಹೇಳುವುದಕ್ಕಿಂತ ಹತ್ತು ಪಟ್ಡು ಹೆಚ್ಚು ಜನ ಮರಣ ಹೊಂದಿದ್ದಾರೆ. ಮೂರೂವರೆ ಲಕ್ಷ ಮಂದಿ ಸತ್ತಿರಬಹುದು ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರು ಅಚ್ಛೇ ದಿನ್ ಬರುತ್ತದೆ ಎಂದಿದ್ದರು. ಅವರ ಮಾತು ಇದೀಗ ಸತ್ಯವಾಗಿದೆ. ಅವರ ಹೇಳಿಕೆಯನ್ನು ಕೆಟ್ಟ ದಿನಗಳು ಮುಂದೆ ಕಾದಿವೆ ಎಂದು ಅರ್ಥ ಮಾಡಿಕೊಳ್ಳಬೇಕು. ಕಳೆದ ಏಳು ವರ್ಷದಲ್ಲಿ ಕೇಂದ್ರ ಸರ್ಕಾರ ರಾಜ್ಯದಿಂದ ಪೆಟ್ರೋಲ್, ಡೀಸೆಲ್ ಮಾರಾಟದ ಮೇಲೆ ವಸೂಲಿ‌ ಮಾಡಿರುವ ತೆರಿಗೆ ಒಂದು ಲಕ್ಷ ಇಪ್ಪತ್ತು  ಸಾವಿರ ಕೋಟಿ. ಕೇಂದ್ರ ಸರ್ಕಾರ ಕೂಡಲೇ ತೆರಿಗೆ ಕಡಿಮೆ ಮಾಡಿ ಪೆಟ್ರೋಲ್, ಡೀಸೆಲ್ ದರ ಕಡಿಮೆ ಮಾಡಬೇಕು. ಬಿಜೆಪಿ ಎಂದರೆ ತಿಗಣೆ ಇದ್ದಂತೆ. ಜನರ ರಕ್ತ ಹೀರುವುದು ಅವರ ಕೆಲಸ. ಆದರೆ ಕಾಂಗ್ರೆಸ್ ಜನರ ಕಣ್ಣೀರು ಒರೆಸುವ ಕೆಲಸ ಮಾಡುತ್ತದೆ ಎಂದು ಹೇಳಿದರು.

ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ಮಾತನಾಡಿ, ಪೆಟ್ರೋಲ್, ಡೀಸೆಲ್ ದರ ಏರಿಕೆ ವಿರುದ್ಧ ಯುವ ಕಾಂಗ್ರೆಸ್ ನಿರಂತರವಾಗಿ ಹೋರಾಟ ಮಾಡಲಿದೆ. ದರ ಇಳಿಕೆಯಾಗುವವರೆಗೆ ನಮ್ಮ ಪ್ರತಿಭಟನೆ ನಿಲ್ಲುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಸಿರುವುದು ಖಂಡನೀಯ. ಇದರಿಂದ ಎಲ್ಲಾ ಬೆಲೆಗಳು ಏರಿಕೆಯಾಗುತ್ತಿದೆ. ಜನತೆ ಇದರಿಂದ ಭಾರೀ ನಷ್ಟ ಹಾಗೂ ತೊಂದರೆಯಾಗುತ್ತಿದೆ. ಅಖಿಲ ಭಾರತ ಮಟ್ಟದಲ್ಲಿ ಹಮ್ಮಿಕೊಂಡಿರುವ ಈ ಪ್ರತಿಭಟನೆ ಮುಂಬರುವ ದಿನಗಳಲ್ಲಿ ಇನ್ನಷ್ಟು ತೀವ್ರಗೊಳ್ಳಲಿದೆ ಎಂದು ರಕ್ಷಾ ರಾಮಯ್ಯ ಹೇಳಿದರು.

Join Whatsapp