ಸಿದ್ದರಾಮಯ್ಯ ಸ್ವಯಂಘೋಷಿತ ಸಂವಿಧಾನ ಪಂಡಿತ: ಕುಮಾರಸ್ವಾಮಿ ವಾಗ್ದಾಳಿ

Prasthutha|

ಬೆಂಗಳೂರು: ಸಿದ್ದರಾಮಯ್ಯ ಸ್ವಯಂಘೋಷಿತ ಸಂವಿಧಾನ ಪಂಡಿತ. ಅವರು ನಮ್ಮ ಪಕ್ಷದ ಬಗ್ಗೆ ಲಘುವಾಗಿ ಮಾತಾಡಿದ್ದಾರೆ. ಹೀಗಾಗಿ ನಾನು ಅವರಿಗೆ ಉತ್ತರವನ್ನು ನೀಡಿದ್ದೇನೆ. ಮಾತು ಆಡಿದ ಮೇಲೆ ಅದನ್ನು ದಕ್ಕಿಸಿಕೊಳ್ಳುವ ಯೋಗ್ಯತೆ ಇರಬೇಕು. ಆ ಯೋಗ್ಯತೆ ಸಿದ್ದರಾಮಯ್ಯಗೆ ಇಲ್ಲ ಅಂತ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.

- Advertisement -

ಸುಖಾಸುಮ್ಮನೆ ಅವರ ಬಗ್ಗೆ ಮಾತಾಡುವ ತೆವಲು ನಂಗಂತೂ ಇಲ್ಲ.  ನಮ್ಮ ಪಕ್ಷದಿಂದ ಎಗರಿಸಿಕೊಂಡು ಹೋಗಿ ಪಕ್ಷಕ್ಕೆ ಸೇರಿಸಿಕೊಳ್ತಾರೆ. ಅಂತಹವರು ನಮ್ಮ ಪಕ್ಷದ ಬಗ್ಗೆ ಏಕೆ ಮಾತನಾಡಬೇಕು ಎಂದು ಪ್ರಶ್ನೆ ಮಾಡಿದ ಕುಮಾರಸ್ವಾಮಿ,  ಜೆಡಿಎಸ್ ಪಕ್ಷವನ್ನು ತುಮಕೂರಿನಿಂದ ಓಡಿಸಿ ಎಂದಿದ್ದು ಯಾವ ಸಂಸ್ಕೃತಿ? ಅಂತ ಸಿದ್ದರಾಮಯ್ಯಗೆ ಕೇಳಿದ್ದಾರೆ.

ಜಿಲ್ಲೆಯಿಂದ ಪಕ್ಷವನ್ನು ಓಡಿಸಿ ಎನ್ನುವುದು ಎಂಥಾ ರಾಜಕೀಯ. ಲಂಗು ಲಗಾಮಿಲ್ಲದೆ ನಾಲಗೆ ಹರಿಬಿಡುವವರಿಂದ ನಾನು ಭಾಷೆ, ಸಂಸ್ಕೃತಿ ಬಗ್ಗೆ ಕಲಿಯಬೇಕಿಲ್ಲ ಅಂತ ಟ್ವೀಟ್ ಮೂಲಕ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಸುಳ್ಳಿನ ಸಿದ್ದಪುರುಷ’ನಿಂದ ಭಾಷೆ-ಸಂಸ್ಕೃತಿ ಕುರಿತು ಪಾಠವೇ? ಅವರಿಂದ ನಾನು ಪಾಠ ಕಲಿಯಬೇಕಾ. ಕುಮಾರಸ್ವಾಮಿ ಬಗ್ಗೆ ಮಾತನಾಡಲ್ಲ ಅಂತಾರೆ, ನನ್ನ ಜಪ ಮಾಡುತ್ತಾರೆ. ಜೆಡಿಎಸ್ ಬಗ್ಗೆ ಸಿದ್ದರಾಮಯ್ಯ ವಿಷ ಕಾರುವುದು ಸುಳ್ಳಾ? ಸಿದ್ದರಾಮಯ್ಯ ಹೇಳಿಕೆಗಳನ್ನು ಇಡೀ ರಾಜ್ಯವೇ ಕೇಳಿಸಿಕೊಂಡಿದೆ ಎಂದು ಕುಮಾರಸ್ವಾಮಿ ಹೇಳಿದರು.

Join Whatsapp