ಸಿದ್ದರಾಮಯ್ಯ ಒಬ್ಬ ಭಯೋತ್ಪಾದಕ : ನಳೀನ್ ಕುಮಾರ್ ಕಟೀಲ್

Prasthutha|

ಮಂಗಳೂರು: ಸಿದ್ದರಾಮಯ್ಯ ಒಬ್ಬ ಭಯೋತ್ಪಾದಕ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನಾಲಿಗೆ ಹರಿಬಿಟ್ಟಿದ್ದಾರೆ.

- Advertisement -

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಆಡಳಿತದಲ್ಲಿ ತಾಲಿಬಾನ್ ಸ್ಥಿತಿ ಇತ್ತು. 24 ಹಿಂದೂ ಯುವಕರನ್ನು ಕೊಲೆಗೈಯ್ಯಲಾಗಿತ್ತು. ದಕ್ಷಿಣ ಕನ್ನಡದಲ್ಲಿ ಪ್ರಶಾಂತ್ ಪೂಜಾರಿ, ಶರತ್ ಮಡಿವಾಳ, ಮಡಿಕೇರಿ ಕುಟ್ಟಪ್ಪ, ದೀಪಕ್ ರಾವ್ ಸೇರಿದಂತೆ ಅನೇಕರು ಸಿದ್ದರಾಮಯ್ಯ ಅವರ ಆಡಳಿತಾವಧಿಯಲ್ಲೇ ಸಾವನ್ನಪ್ಪಿರೋದು ಎಂದರು.


ಸಿದ್ದರಾಮಯ್ಯ ಅತಂತ್ರ ಸ್ಥಿತಿಯಲ್ಲಿದ್ದಾರೆ. ಅವರ ಆಡಳಿತದಲ್ಲಿ ಅನೇಕರ ಹತ್ಯೆಯಾಗಿದೆ. ಸುಳ್ಯದಲ್ಲಿ ಕಾಲೇಜಿಗೆ ಹೋದಂತ ವಿದ್ಯಾರ್ಥಿನಿಯನ್ನು ಹತ್ಯೆ ಮಾಡಲಾಯ್ತು. ಈ ಎಲ್ಲವನ್ನು ನೋಡಿದ್ರೇ ಸಿದ್ದರಾಮಯ್ಯ ಆಡಳಿತ ತಾಲಿಬಾನ್ ಆಡಳಿತವಾಗಿದೆ ಎಂದು ಹೇಳಿದ್ದಾರೆ.

Join Whatsapp