ಸಿದ್ದರಾಮಯ್ಯ ಮುಗ್ಧ ಅಲ್ಲ, ಧೂರ್ತ: ಪ್ರಲ್ಹಾದ್ ಜೋಶಿ

Prasthutha|

ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮುಗ್ಧರಲ್ಲ, ಧೂರ್ತ ಎಂದು ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ವಾಗ್ದಾಳಿ ನಡೆಸಿದ್ದಾರೆ.

- Advertisement -

ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಹಿಜಾಬ್ ನಿಷೇಧವೇ ಆಗಿಲ್ಲ, ಹೀಗಿರುವಾಗ ಹಿಜಾಬ್ ಬ್ಯಾನ್ ಹಿಂಪಡೆಯುತ್ತೇವೆ ಅಂದರೆ ಅದಕ್ಕೆ ಅರ್ಥವಿಲ್ಲ. ಸಮವಸ್ತ್ರ ಸಂಹಿತೆ ಬಿಟ್ಟು ಹಿಜಾಬ್ ಧರಿಸಲು ಅವಕಾಶ ಕೊಡುತ್ತೇವೆ ಎಂದು ಹೇಳಿದರೆ, ಆಗ ಇನ್ನೊಬ್ಬರು ನಾವು ಕೇಸರಿ ಶಾಲು ಹಾಕಿಕೊಂಡು ಬರುತ್ತೇವೆ ಎನ್ನುತ್ತಾರೆ.ಸಿದ್ದರಾಮಯ್ಯನವರೇ ನೀವು ರಾಜ್ಯವನ್ನು ಏನು ಮಾಡುವುದಕ್ಕೆ ಹೊರಟಿದ್ದೀರಿ, ಸಮಾಜ ಒಡೆಯಲು ಅತ್ಯಂತ ತಲೆ ಕೆಟ್ಟವರ ತರಹ ಹೇಳಿಕೆ ಕೊಡುತ್ತಿದ್ದಿರೋ? ಸಮಾಜ ಒಡೆದು ವೋಟ್ ತಗೆದುಕೊಳ್ಳಬೇಕು ಎನ್ನುವುದು ನಿಮ್ಮ ಉದ್ದೇಶ ಎಂದು ಪ್ರಲ್ಹಾದ್​ ಜೋಶಿ ಪ್ರಶ್ನಿಸಿದ್ದಾರೆ.



Join Whatsapp